ಶರವಣ ಭವನ ಮಾಲೀಕ ರಾಜಗೋಪಾಲ್ 
ದೇಶ

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ: ಶರಣಾದ ಶರವಣ ಭವನ ಮಾಲೀಕ

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶರವಣ ಭವನ ಹೋಟೆಲ್ ಸಮೂಹದ ಮಾಲೀಕ ಪಿ.ರಾಜಗೋಪಾಲ್‌ ಅವರು ಕೊನೆಗೂ ಮಂಗಳವಾರ...

ನವದೆಹಲಿ: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶರವಣ ಭವನ ಹೋಟೆಲ್ ಸಮೂಹದ ಮಾಲೀಕ ಪಿ.ರಾಜಗೋಪಾಲ್‌ ಅವರು ಕೊನೆಗೂ ಮಂಗಳವಾರ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಶರಣಾಗಲು ಹೆಚ್ಚಿನ ಕಾಲಾವಕಾಶ ಕೋರಿ ರಾಜಗೋಪಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಕೆಲವೇ ಗಂಟೆಗಳಲ್ಲಿ ಅಪರಾಧಿ ಸೆಷನ್ಸ್ ಕೋರ್ಟ್ ಮುಂದೆ ಶರಣಾಗಿದ್ದಾರೆ.
ಅನಾರೋಗ್ಯದ ಕಾರಣ ನೀಡಿ, ಶರಣಾಗಲು ಹೆಚ್ಚಿನ ಕಾಲಾವಕಾಶ ಕೋರಿ ರಾಜಗೋಪಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎನ್ ವಿ ರಾಮಣ್ಣ  ನೇತೃತ್ವದ ಪೀಠ ತಿರಸ್ಕರಿಸಿತ್ತು.
2001 ರಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷಗೆ ಗುರಿಯಾಗಿರುವ ರಾಜಾ ಗೋಪಾಲ್ ಜುಲೈ 7 ರಂದು ಕೋರ್ಟ್ ಗೆ ಶರಣಾಗಬೇಕಿತ್ತು. ಆದರೆ ಅವರು ಶರಣಾಗಿರಲಿಲ್ಲ.
ಕಳೆದ ಕೆಲವು ದಿನಗಳಿಂದ ಇಲ್ಲಿನ ಅಶೋಕನಗರದ ಮನೆಯಲ್ಲಿ ವಾಸವಿದ್ದ ರಾಜಗೋಪಾಲ್‌ ಗುರುವಾರ ಆಸ್ಪತ್ರೆಗೆ ದಾಖಲಾಗಿದ್ದರು. ಅನಾರೋಗ್ಯದ ಕಾರಣ ಹೇಳಿಯೇ ಅವರು ತಮ್ಮ ಶರಣಾಗತಿಯನ್ನು ಅವಧಿಯನ್ನು ವಿಸ್ತರಿಸಲು ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.
ತನ್ನ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ನೌಕರನ ಹೆಂಡತಿಯನ್ನು ಮದುವೆಯಾಗುವ ದುರುದ್ದೇಶದಿಂದ 2001ರ ಅಕ್ಟೋಬರ್‌ನಲ್ಲಿ ನೌಕರನನ್ನು ಅಪಹರಿಸಿ ಕೊಲೆ ಮಾಡಿದ್ದ ಶರವಣ ಭವನ ಹೋಟೆಲ್ ಸಮೂಹದ ಮಾಲೀಕ ಪಿ.ರಾಜಗೋಪಾಲ್‌ಗೆ ಮದ್ರಾಸ್ ಹೈಕೋರ್ಟ್‌ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದು, ಜುಲೈ 7ರ ಒಳಗೆ ಶರಣಾಗಬೇಕು ಎಂದು ಸೂಚಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT