ಪ್ರತಿಭಟನೆ 
ದೇಶ

ತಿವಾರೆ ಅಣೆಕಟ್ಟು ಬಗ್ಗೆ ಅಸಂಬದ್ಧ ಹೇಳಿಕೆ: ಮಹಾರಾಷ್ಟ್ರ ಸಚಿವರ ನಿವಾಸದ ಹೊರಗಡೆ ಏಡಿ ಸುರಿದು ಪ್ರತಿಭಟನೆ

ತ್ನ ಗಿರಿ ಜಿಲ್ಲೆಯ ತಿವಾರೆ ಅಣೆಕಟ್ಟು ಒಡೆಯಲು ಏಡಿಗಳೇ ಕಾರಣ ಎಂದು ಅಸಂಬದ್ಧ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಜಲ ಸಂರಕ್ಷಣಾ ಸಚಿವ ತಾನಾಜಿ ಸವಾಂತ್ ಮನೆಯ ಹೊರಗಡೆ ಏಡಿಗಳನ್ನು ಸುರಿದು ಎನ್ ಸಿಪಿ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದಾರೆ.

ಮುಂಬೈ:  ರತ್ನ ಗಿರಿ ಜಿಲ್ಲೆಯ ತಿವಾರೆ ಅಣೆಕಟ್ಟು ಒಡೆಯಲು ಏಡಿಗಳೇ ಕಾರಣ ಎಂದು ಅಸಂಬದ್ಧ ಹೇಳಿಕೆ ನೀಡಿದ್ದ ಮಹಾರಾಷ್ಟ್ರ  ಜಲ ಸಂರಕ್ಷಣಾ ಸಚಿವ ತಾನಾಜಿ ಸವಾಂತ್ ಮನೆಯ ಹೊರಗಡೆ ಏಡಿಗಳನ್ನು ಸುರಿದು ಎನ್ ಸಿಪಿ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದಾರೆ.
ನಂತರ ಈ ಏಡಿಗಳನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡ ಹೋದ ಎನ್ ಸಿಪಿ ಮಹಿಳಾ ವಿಭಾಗದ ಕಾರ್ಯಕರ್ತರು, ಸಚಿವರ ಮನೆಯನ್ನು ಒಡೆಯಲು ಪ್ರಯತ್ನಿಸುತ್ತಿದ್ದ ಏಡಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ.
ತಿವಾರೆ ಜಲಾಶಯ ಒಡೆದು 20 ಜನರು ಮೃತಪಟ್ಟಿದ್ದರು. ಈ ಸಂಬಂಧ ಹೇಳಿಕೆ ನೀಡಿದ್ದ ಸಚಿವ ತಾನಾಜಿ ಸವಾಂತ್,  ಜಲಾಶಯದಿಂದ ಈ ಹಿಂದೆ ಯಾವಾಗಲೂ ಸೋರಿಕೆ ಕಂಡುಬಂದಿರಲಿಲ್ಲ. ಅಣೆಕಟ್ಟಿನಲ್ಲಿ ಅಪಾರ ಪ್ರಮಾಣದ ಏಡಿಗಳು ಕಂಡುಬಂದ ನಂತರ ಸೋರಿಕೆಯಾಗಿದೆ. ಈ ಬಗ್ಗೆ ಸ್ಥಳೀಯರು ನೀಡಿರುವ ದೂರು ತಮ್ಮ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಇಲಾಖೆ  ಕಾರ್ಯೋನ್ಮುಖವಾಗಿದೆ. ಈ ಘಟನೆ ದುರದೃಷ್ಟಕರ ಎಂದಿದ್ದರು. 
ಕಳೆದ ವಾರ ಎನ್ ಸಿಪಿ ಮುಖಂಡ ಜೀತೇಂದ್ರ ಅವಾಡೆ ನೌಪಾದಾ ಠಾಣೆ ಮುಂಭಾಗ ಏಡಿಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದರು. ಧಾರಾಕಾರ ಮಳೆಯಿಂದಾಗಿ ಜುಲೈ 3 ರಂದು ತಿವಾರೆ ಜಲಾಶಯ ಒಡೆದಿತ್ತು. ಇದರಿಂದಾಗಿ ಏಳು ಹಳ್ಳಿಗಳು ಜಲಾವೃತಗೊಂಡು,ಸಂತ್ರಸ್ತರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿತ್ತು. ಪರಿಸ್ಥಿತಿ ಈಗ ನಿಯಂತ್ರಣಕ್ಕೆ ಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT