ಸಿಎಂ ಕಮಲನಾಥ್ 
ದೇಶ

ಕರ್ನಾಟಕ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್ ಶಾಸಕರನ್ನು ರಕ್ಷಿಸಿಕೊಳ್ಳಲು ಸಿಎಂ ಕಮಲನಾಥ್!

ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನದ ಅಂಚಿನಲ್ಲಿರುವ ಸಂದರ್ಭದಲ್ಲೇ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ತಮ್ಮ ...

ಭೂಪಾಲ್: ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನದ ಅಂಚಿನಲ್ಲಿರುವ ಸಂದರ್ಭದಲ್ಲೇ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಮುಂದಾಗಿದ್ದಾರೆ.
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾಗಿ 7 ತಿಂಗಳಾಗಿದೆ, ಬಿಜೆಪಿಯಿಂದ ಸರ್ಕಾರ ಉಳಿಸಿಕೊಳ್ಳುವ ಸಲುವಾಗಿ ಕಮಲನಾಥ್ ಎಲ್ಲಾ ರೀತಿಯ ಸರ್ಕಸ್ ನಡೆಸುತ್ತಿದ್ದಾರೆ,
ತಮಗೆ ಬೆಂಬಲ ನೀಡಿರುವ ಎಸ್ ಪಿ , ಬಿಎಸ್ ಪಿ ಮತ್ತು ಪಕ್ಷೇತರ ಶಾಸಕರು ಯಾವುದೇ ಕಾರಣಕ್ಕೂ ರಾಜ್ಯ ರಾಜಧಾನಿಯನ್ನು ಬಿಟ್ಟು ಹೋಗದಂತೆ ಆದೇಶ ಹೊರಡಿಸಿದ್ದಾರೆ. ಶೀಘ್ರದಲ್ಲೇ ಮುಂಗಾರು ಅಧಿವೇಶನ ಆರಂಭವಾಗುವವರೆಗೂ ಎಲ್ಲಿಗೂ ತೆರಳದಂತೆ ಸೂಚಿಸಿದ್ದಾರೆ.
ಮುಂಗಾರು ಅಧಿವೇಶನದಲ್ಲಿ ಹಣಕಾಸು ಮಸೂದೆ ಮಂಡಿಸಲು ಅಗತ್ಯ ಶಾಸಕರ ಅವಶ್ಯಕತೆ ಇರುವ ಕಾರಣ ಎಲ್ಲಾ ಶಾಸಕರು ಹಾಜರಿರಬೇಕೆಂದು ತಿಳಿಸಿದ್ದಾರೆ.
ಜುಲೈ 8ರಿಂದ ಮಧ್ಯಪ್ರದೇಶ ವಿಧಾನಸಭೆ ಕಲಾಪ ಆರಂಭವಾಗಿದ್ದು, 19 ದಿನಗಳ ಕಾಲ ಸದನ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್‌ ದಾಳಿ; ಭಾರತೀಯ ಸೇರಿ ನಾಲ್ವರಿಗೆ ಗಾಯ

ಬೆಂಗಳೂರಿನಲ್ಲಿ ಗೃಹಬಳಕೆ ಎಲ್‌ಪಿಜಿಯಲ್ಲೂ ಕೊರತೆ: ಬುಕಿಂಗ್ ನಂಬರ್ ಸ್ವಿಚ್ ಆಫ್; ಹೆಚ್ಚಿದ ಆತಂಕ

ಕೇವಲ ಮಧುರೈ ಏಕೆ? ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತರರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ

ಛತ್ತೀಸ್‌ಗಢದಲ್ಲಿ ಮತ್ತೊಂದು ಮಹಾ ಶರಣಾಗತಿ: 108 ನಕ್ಸಲರು ಪೊಲೀಸರಿಗೆ ಶರಣು!

ಮಂಡ್ಯ: ಅರ್ಚಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಪತ್ನಿಯ ಕಿರಾತಕ ಸಂಚು ಬಯಲು!

SCROLL FOR NEXT