ಶಿವರಾಮ್ ಹೆಬ್ಬಾರ್ 
ದೇಶ

ಪುತ್ರನ ಮೂಲಕ ಕ್ರಮಬದ್ಧ ರಾಜೀನಾಮೆ ಪತ್ರ ಸಲ್ಲಿಸಿದ ಅತೃಪ್ತ ಶಾಸಕ ಶಿವರಾಂ ಹೆಬ್ಬಾರ್

ಮುಂಬೈನ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಅತೃಪ್ತ ಶಾಸಕ ಶಿವರಾಂ ಹೆಬ್ಬಾರ್ ಅವರು ತಮ್ಮ ಪುತ್ರ ವಿವೇಕ್ ಮೂಲಕ ಸ್ಪೀಕರ್ ರಮೇಶ್ ಕುಮಾರ್...

ಬೆಂಗಳೂರು: ಮುಂಬೈನ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಅತೃಪ್ತ ಶಾಸಕ ಶಿವರಾಂ ಹೆಬ್ಬಾರ್ ಅವರು ತಮ್ಮ ಪುತ್ರ ವಿವೇಕ್ ಮೂಲಕ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಕ್ರಮಬದ್ಧವಾದ ರಾಜೀನಾಮೆ ಪತ್ರ ಕಳುಹಿಸಿದ್ದಾರೆ.
ಇಂದು ಕ್ರಮಬದ್ಧವಾದ ರಾಜೀನಾಮೆ ಪತ್ರದೊಂದಿಗೆ ಸ್ಪೀಕರ್ ಕಚೇರಿಗೆ ಬಂದ ಪುತ್ರ ವಿವೇಕ್ ಹೆಬ್ಬಾರ್ ಅವರು ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿಯವರಿಗೆ ಪತ್ರ ಸಲ್ಲಸಿದರು.
ಮತ್ತೊಬ್ಬ ಅತೃಪ್ತ ಕಾಂಗ್ರೆಸ್ ಶಾಸಕ ಭೈರತಿ ಬಸವರಾಜ್ ಅವರು ಸಹ ತಮ್ಮ ಆಪ್ತ ಸಹಾಯಕನ ಮೂಲಕ ಕ್ರಮಬದ್ಧವಾದ ರಾಜೀನಾಮೆ ಪತ್ರವನ್ನು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಕಳುಹಿಸಿದ್ದಾರೆ. ಆದರೆ ಈ ರೀತಿ ಬೇರೆಯವರ ಮೂಲಕ ರಾಜೀನಾಮೆ ಪತ್ರ ಸಲ್ಲಿಸಿದರೆ ಅದನ್ನು ಪರಿಗಣಿಸುವುದಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಅವರು ಹೇಳಿದ್ದಾರೆ.
ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಎಂಟು ಅತೃಪ್ತ ಶಾಸಕರ ರಾಜೀನಾಮೆ ಪತ್ರ ಕ್ರಮಬದ್ಧವಾಗಿಲ್ಲ ಎಂದು ಹೇಳಿದ್ದರು. ಈ ಪೈಕಿ ಶಿವರಾಂ ಹೆಬ್ಬಾರ್ ಹಾಗೂ ಭೈರತಿ ಬಸವರಾಜ್ ರಾಜೀನಾಮೆ ಪತ್ರ ಕ್ರಮ‌ಬದ್ಧವಾಗಿಲ್ಲ ಎಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT