ಸಾಂದರ್ಭಿಕ ಚಿತ್ರ 
ದೇಶ

ಗೋವಾ: ಪರಿಕ್ಕರ್ ರಾಜಕೀಯ ಪರಂಪರೆಯೂ ಸತ್ತಿದೆ- ನಿರ್ಗಮಿತ ಉಪಮುಖ್ಯಮಂತ್ರಿ

ಕಾಂಗ್ರೆಸ್ ಪಕ್ಷದ 10 ಶಾಸಕರು ಬಿಜೆಪಿ ಸೇರ್ಪಡೆಯಿಂದಾಗಿ ದಿವಂಗತ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ರಾಜಕೀಯ ಪರಂಪರೆಯೂ ಸತ್ತಿದೆ ಎಂದು ನಿರ್ಗಮಿತ ಉಪಮುಖ್ಯಮಂತ್ರಿ ವಿಜಯ್ ಸರ್ ದೇಸಾಯಿ ಕಿಡಿಕಾರಿದ್ದಾರೆ.

ಗೋವಾ: ಕಾಂಗ್ರೆಸ್ ಪಕ್ಷದ 10 ಶಾಸಕರು ಬಿಜೆಪಿ ಸೇರ್ಪಡೆಯಿಂದಾಗಿ ದಿವಂಗತ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ರಾಜಕೀಯ ಪರಂಪರೆಯೂ ಸತ್ತಿದೆ ಎಂದು ನಿರ್ಗಮಿತ ಉಪಮುಖ್ಯಮಂತ್ರಿ ವಿಜಯ್ ಸರ್ ದೇಸಾಯಿ ಕಿಡಿಕಾರಿದ್ದಾರೆ. 
ಬಿಜೆಪಿಯ ಹಿರಿಯ ನಾಯಕರಾಗಿದ್ದ ವಿಜಯ್ ಸರ್ ದೇಸಾಯಿ  2017ರಲ್ಲಿ ಪ್ರಾದೇಶಿಕ ಪಕ್ಷಗಳ ಬೆಂಬಲದೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸುವಲ್ಲಿ ಪ್ರಮುಖ ಕೊಡುಗೆ ನೀಡಿದ್ದರು.
ಗೋವಾ ಕಾಂಗ್ರೆಸ್ ನ್ನು ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ 10 ಶಾಸಕರ ಪೈಕಿ ಮೂವರನ್ನು  ಸಿಎಂ ಪ್ರಮೋದ್ ಸಾವಂತ್ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಹಾಗೆಯೇ  ಸರ್ ದೇಸಾಯಿ ಸೇರಿದಂತೆ ಗೋವಾ ಫಾರ್ವಡ್ ಪಕ್ಷದ ಮೂವರು ಹಾಗೂ ಒಬ್ಬ ಪಕ್ಷೇತರ ಅಭ್ಯರ್ಥಿಯನ್ನು ಸಂಪುಟದಿಂದ ಕೈ ಬಿಟಿದ್ದಾರೆ.
ಮಾರ್ಚ್ 17 ರಂದು  ಪರಿಕ್ಕರ್  ದೈಹಿಕವಾಗಿ ಮರಣ ಹೊಂದಿದ್ದರು. ಆದರೆ, ಇಂದು ಅವರ ರಾಜಕೀಯ ಪರಂಪರೆಯೂ ಸತ್ತಿದೆ ಎಂದು ಮಿರಾಮರ್ ಬಳಿಯ ಪರಿಕ್ಕರ್ ಸ್ಮಾರಕ ಬಳಿ ನೆರೆದಿದ್ದ ಜನರನ್ನುದ್ದೇಶಿಸಿ ಮಾತನಾಡುತ್ತಿದ್ದರು. ಈ ಮಧ್ಯೆ  ಬಿಜೆಪಿಗೆ ನೀಡಿದ್ದ ಬೆಂಬಲವನ್ನು ಗೋವಾ ಫಾರ್ವಡ್ ಪಕ್ಷ ಹಿಂತೆಗೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.
ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಬೆಂಬಲ ನೀಡುವುದಾಗಿ ಪರಿಕ್ಕರ್ ಅವರಿಗೆ ಮಾತು ಕೊಟ್ಟಿದ್ದ ಹಿನ್ನೆಲೆಯಲ್ಲಿ ಪ್ರಮೋದ್ ಸಾವಂತ್ ಅವರ ಸರ್ಕಾರಕ್ಕೆ ಬೆಂಬಲ ನೀಡಿದ್ದೇವು. ಆದರೆ, ಈಗ ಮೋಸ ಹೋಗಿದಂತಾಗಿದೆ. ಕೇಂದ್ರದ ಬಿಜೆಪಿ ವರಿಷ್ಠರಿಂದ ಯಾವುದೇ ಮಾಹಿತಿ ಪಡೆದುಕೊಂಡಿಲ್ಲ. ಮೈತ್ರಿ ಪಕ್ಷಗಳಿಗೆ ಎನ್ ಡಿಎಯಲ್ಲಿ ಸರಿಯಾದ ರೀತಿಯಲ್ಲಿ ನೋಡಿಕೊಳ್ಳುತ್ತಿಲ್ಲ ಎಂದು ಅವರು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT