ಸಾಂದರ್ಭಿಕ ಚಿತ್ರ 
ದೇಶ

ಗೋವಾ: ಪರಿಕ್ಕರ್ ರಾಜಕೀಯ ಪರಂಪರೆಯೂ ಸತ್ತಿದೆ- ನಿರ್ಗಮಿತ ಉಪಮುಖ್ಯಮಂತ್ರಿ

ಕಾಂಗ್ರೆಸ್ ಪಕ್ಷದ 10 ಶಾಸಕರು ಬಿಜೆಪಿ ಸೇರ್ಪಡೆಯಿಂದಾಗಿ ದಿವಂಗತ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ರಾಜಕೀಯ ಪರಂಪರೆಯೂ ಸತ್ತಿದೆ ಎಂದು ನಿರ್ಗಮಿತ ಉಪಮುಖ್ಯಮಂತ್ರಿ ವಿಜಯ್ ಸರ್ ದೇಸಾಯಿ ಕಿಡಿಕಾರಿದ್ದಾರೆ.

ಗೋವಾ: ಕಾಂಗ್ರೆಸ್ ಪಕ್ಷದ 10 ಶಾಸಕರು ಬಿಜೆಪಿ ಸೇರ್ಪಡೆಯಿಂದಾಗಿ ದಿವಂಗತ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ರಾಜಕೀಯ ಪರಂಪರೆಯೂ ಸತ್ತಿದೆ ಎಂದು ನಿರ್ಗಮಿತ ಉಪಮುಖ್ಯಮಂತ್ರಿ ವಿಜಯ್ ಸರ್ ದೇಸಾಯಿ ಕಿಡಿಕಾರಿದ್ದಾರೆ. 
ಬಿಜೆಪಿಯ ಹಿರಿಯ ನಾಯಕರಾಗಿದ್ದ ವಿಜಯ್ ಸರ್ ದೇಸಾಯಿ  2017ರಲ್ಲಿ ಪ್ರಾದೇಶಿಕ ಪಕ್ಷಗಳ ಬೆಂಬಲದೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸುವಲ್ಲಿ ಪ್ರಮುಖ ಕೊಡುಗೆ ನೀಡಿದ್ದರು.
ಗೋವಾ ಕಾಂಗ್ರೆಸ್ ನ್ನು ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ 10 ಶಾಸಕರ ಪೈಕಿ ಮೂವರನ್ನು  ಸಿಎಂ ಪ್ರಮೋದ್ ಸಾವಂತ್ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಹಾಗೆಯೇ  ಸರ್ ದೇಸಾಯಿ ಸೇರಿದಂತೆ ಗೋವಾ ಫಾರ್ವಡ್ ಪಕ್ಷದ ಮೂವರು ಹಾಗೂ ಒಬ್ಬ ಪಕ್ಷೇತರ ಅಭ್ಯರ್ಥಿಯನ್ನು ಸಂಪುಟದಿಂದ ಕೈ ಬಿಟಿದ್ದಾರೆ.
ಮಾರ್ಚ್ 17 ರಂದು  ಪರಿಕ್ಕರ್  ದೈಹಿಕವಾಗಿ ಮರಣ ಹೊಂದಿದ್ದರು. ಆದರೆ, ಇಂದು ಅವರ ರಾಜಕೀಯ ಪರಂಪರೆಯೂ ಸತ್ತಿದೆ ಎಂದು ಮಿರಾಮರ್ ಬಳಿಯ ಪರಿಕ್ಕರ್ ಸ್ಮಾರಕ ಬಳಿ ನೆರೆದಿದ್ದ ಜನರನ್ನುದ್ದೇಶಿಸಿ ಮಾತನಾಡುತ್ತಿದ್ದರು. ಈ ಮಧ್ಯೆ  ಬಿಜೆಪಿಗೆ ನೀಡಿದ್ದ ಬೆಂಬಲವನ್ನು ಗೋವಾ ಫಾರ್ವಡ್ ಪಕ್ಷ ಹಿಂತೆಗೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.
ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಬೆಂಬಲ ನೀಡುವುದಾಗಿ ಪರಿಕ್ಕರ್ ಅವರಿಗೆ ಮಾತು ಕೊಟ್ಟಿದ್ದ ಹಿನ್ನೆಲೆಯಲ್ಲಿ ಪ್ರಮೋದ್ ಸಾವಂತ್ ಅವರ ಸರ್ಕಾರಕ್ಕೆ ಬೆಂಬಲ ನೀಡಿದ್ದೇವು. ಆದರೆ, ಈಗ ಮೋಸ ಹೋಗಿದಂತಾಗಿದೆ. ಕೇಂದ್ರದ ಬಿಜೆಪಿ ವರಿಷ್ಠರಿಂದ ಯಾವುದೇ ಮಾಹಿತಿ ಪಡೆದುಕೊಂಡಿಲ್ಲ. ಮೈತ್ರಿ ಪಕ್ಷಗಳಿಗೆ ಎನ್ ಡಿಎಯಲ್ಲಿ ಸರಿಯಾದ ರೀತಿಯಲ್ಲಿ ನೋಡಿಕೊಳ್ಳುತ್ತಿಲ್ಲ ಎಂದು ಅವರು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT