ಮೈತ್ರಿಗೆ ಮತ್ತೊಂದು ಮರ್ಮಾಘಾತ: ಬಂಡಾಯ ಶಾಸಕರಿಂದ ಮತ್ತೊಂದು ಅಘಾತಕಾರಿ ಮಾಹಿತಿ ಬಹಿರಂಗ! 
ದೇಶ

ಮೈತ್ರಿಗೆ ಮತ್ತೊಂದು ಮರ್ಮಾಘಾತ: ಬಂಡಾಯ ಶಾಸಕರಿಂದ ಮತ್ತೊಂದು ಅಘಾತಕಾರಿ ಮಾಹಿತಿ ಬಹಿರಂಗ!

ಮುಂಬೈ ನಲ್ಲಿರುವ ಕರ್ನಾಟಕದ ಬಂಡಾಯ ಶಾಸಕರು ರಾಜೀನಾಮೆ ನೀಡುವುದಿಲ್ಲ. ಎಂಟಿಬಿ ನಾಗರಾಜ್ ಈಗಾಗಲೇ ನಮ್ಮನ್ನು ಸೇರಿಕೊಂಡಿದ್ದಾರೆ. ಸುಧಾಕರ್ ಕೂಡಾ ನಮ್ಮ ಜೊತೆ ಸೇರಿಕೊಳ್ಳಲಿದ್ದಾರೆ

ಮುಂಬೈ: ಮುಂಬೈ ನಲ್ಲಿರುವ ಕರ್ನಾಟಕದ ಬಂಡಾಯ ಶಾಸಕರು ರಾಜೀನಾಮೆ ನೀಡುವುದಿಲ್ಲ. ಎಂಟಿಬಿ ನಾಗರಾಜ್ ಈಗಾಗಲೇ ನಮ್ಮನ್ನು ಸೇರಿಕೊಂಡಿದ್ದಾರೆ.  ಸುಧಾಕರ್ ಕೂಡಾ ನಮ್ಮ ಜೊತೆ ಸೇರಿಕೊಳ್ಳಲಿದ್ದಾರೆ ಎಂದು ಶಾಸಕ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. 
ಬಂಡಾಯವೆದ್ದಿರುವ ಕಾಂಗ್ರೆಸ್ ಶಾಸಕರು ಜು.14 ರಂದು ಮುಂಬೈ  ಹೊಟೆಲ್ ನಿಂದಲೇ ಸುದ್ದಿಗೋಷ್ಠಿ ನಡೆಸಿದ್ದು,  ಇಲ್ಲಿರುವ 12 ಶಾಸಕರು ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
ಎಂಟಿಬಿ ನಾಗರಾಜ್ ಅವರು ಬಂಡಾಯ ಶಾಸಕರ ಮನವೊಲಿಕೆಗಾಗಿ ಮುಂಬೈ ಗೆ ಬಂದಿದ್ದಾರೆ ಎಂಬ ವರದಿ ಪ್ರಕಟವಾಗಿದೆ. ಆದರೆ ಅವರು ಮನವೊಲಿಕೆಗಾಗಿ ಬಂದಿಲ್ಲ. ಬದಲಾಗಿ ಅವರೂ ನಮ್ಮ ಜೊತೆ ಸೇರಿಕೊಂಡಿದ್ದಾರೆ. ಅವರೊಂದಿಗೆ ರಾಜೀನಾಮೆ ನೀಡಿದ್ದ ಡಾ. ಸುಧಾಕರ್ ದೆಹಲಿಯಲ್ಲಿದ್ದು ಅವರೂ ನಮ್ಮ ಜೊತೆ ಸೇರಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. 
ರಾಜೀನಾಮೆ ನೀಡಿರುವ ನಮ್ಮ ನಿಲುವನ್ನು ಬದಲಾವಣೆ ಮಾಡುವುದಿಲ್ಲ, ಮುಂಬೈ ನಲ್ಲಿರುವ ಶಾಸಕರ ನಡುವೆ ಗುಂಪುಗಾರಿಕೆ ಇಲ್ಲ, ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ, ಯಾರನ್ನೂ ಸಂಪರ್ಕಿಸಲು ತಯಾರಿಲ್ಲ ಎಂದು ಸೋಮಶೇಖರ್ ಹೇಳಿದ್ದಾರೆ. ರಾಜೀನಾಮೆ ನೀಡಿದ ಸಂದರ್ಭದಲ್ಲಿ ಡಾ.ಸುಧಾಕರ್ ಮೇಲೆ ನಡೆದಿರುವ ಹಲ್ಲೆ ಖಂಡನೀಯ ಎಂದು ಬಂಡಾಯ ಶಾಸಕರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT