ನವಜೋತ್ ಸಿಂಗ್ ಸಿಧು 
ದೇಶ

ಪಂಜಾಬ್ ಮುಖ್ಯಮಂತ್ರಿಗೆ ರಾಜೀನಾಮೆ ಸಲ್ಲಿಸಿದ ನವಜೋತ್ ಸಿಂಗ್ ಸಿಧು

ಪಂಜಾಬ್ ಮುಖ್ಯಮಂತ್ರಿಗಳಿಗೆ ಇಂದು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿರುವುದಾಗಿ ಟ್ವೀಟರ್ ನಲ್ಲಿ ನವಜೋತ್ ಸಿಂಗ್ ಸಿಧು ಬರೆದುಕೊಂಡಿದ್ದಾರೆ.

ಚಂಡೀಗಡ: ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸಂಪುಟದಿಂದ  ನವಜೋತ್ ಸಿಂಗ್ ಸಿಧು ಹೊರಬರಲಿದ್ದಾರೆ ಎಂಬ ಬಗ್ಗೆ ಇದ್ದಂತಹ ಉಹಾಪೋಹಗಳಿಗೆ ಕೊನೆಗೂ ತೆರೆ ಬಿದಿದೆ.  ಪಂಜಾಬ್ ನಲ್ಲಿರುವ ಮುಖ್ಯಮಂತ್ರಿಗಳ ನಿವಾಸಕ್ಕೆ ನವಜೋತ್ ಸಿಂಗ್ ಸಿಧು ಇಂದು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಪಂಜಾಬ್ ಮುಖ್ಯಮಂತ್ರಿಗಳಿಗೆ ಇಂದು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿರುವುದಾಗಿ ಟ್ವೀಟರ್ ನಲ್ಲಿ ನವಜೋತ್ ಸಿಂಗ್ ಸಿಧು ಬರೆದುಕೊಂಡಿದ್ದಾರೆ.
ಮಾಜಿ ಕ್ರಿಕೆಟ್ ಆಟಗಾರ ಹಾಗೂ ರಾಜಕಾರಣಿಯಾಗಿರುವ ನವಜೋತ್ ಸಿಂಗ್ ಸಿಧು ನಿನ್ನೆ ದಿನ ಅಮರೀಂದರ್ ಸಿಂಗ್ ಬದಲಿಗೆ ರಾಹುಲ್ ಗಾಂಧಿ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. 
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಹೋಗಿ ಅಲ್ಲಿನ ಸೇನಾ ಮುಖ್ಯಸ್ಥರನ್ನು ತುಂಬಿಕೊಂಡು ವಿವಾದ ಸೃಷ್ಟಿಸಿ ಬಂದ ನಂತರ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹಾಗೂ ನವಜೋತ್ ಸಿಂಗ್ ಸಿಧು ನಡುವೆ ಮನಸ್ತಾಪ ಬೆಳೆದಿತ್ತು.
 ಇತ್ತೀಚಿನ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಇದು ಇನ್ನಷ್ಟು ಬೆಳೆದಿತ್ತು.  ಚಂಡೀಗಢ ಅಥವಾ ಅಮೃತಸರದಿಂದ ಸ್ಪರ್ಧಿಸಲು ಟಿಕೆಟ್  ದೊರೆಯದಿರಲು ಅಮರೀಂದರ್ ಸಿಂಗ್ ಅವರೇ ಕಾರಣ ಎಂದು ಸಿಧು ಅವರ ಹೆಂಡತಿ ಆರೋಪಿಸಿದ್ದರು.
ನವಜೋತ್ ಸಿಂಗ್ ಸಿಧು ರಾಜೀನಾಮೆ ಕುರಿತಂತೆ ಪ್ರತಿಕ್ರಿಯಿಸಿರುವ ಅಮರೀಂದರ್ ಸಿಂಗ್,  ಸಿಧು ಜೊತೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಸಂಪುಟ ಪುನಾರಚನೆ ಬಳಿಕ ಪ್ರಮುಖವಾದ ಖಾತೆಯನ್ನೇ ನೀಡಲಾಗಿದೆ.ಇದರಿಂದಾಗಿ ಸಂಪುಟದಿಂದ ಹೊರಹೋಗಲು ನಿರ್ಧರಿಸಿದ್ದಾರೆ. ರಾಜೀನಾಮೆ ಪತ್ರವನ್ನು ಕಚೇರಿಗೆ ಕಳುಹಿಸುವಂತೆ ಹೇಳಿದ್ದೆ. ಬಂದಿದ್ದರೆ ಏನು ಮಾಡಬಹುದು ಎಂಬುದನ್ನು ನೋಡುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT