ಸಂಗ್ರಹ ಚಿತ್ರ 
ದೇಶ

ಅನೈತಿಕ ಸಂಬಂಧ ಶಂಕೆ: ಮಾಡೆಲ್ ಮುಖ ಕಲ್ಲಿನಿಂದ ಜಜ್ಜಿ ಪ್ರಿಯಕರನಿಂದಲೇ ಭೀಕರ ಕೊಲೆ!

ಪ್ರೀತಿಯ ಗುಂಗಿನಲ್ಲಿ ಮುಳುಗಿದ್ದ ಪ್ರಿಯಕರನೊಬ್ಬ ತನ್ನ ಪ್ರಿಯತಮೆ ಜೊತೆ ಮದುವೆಯಾಗಿ ಬಾಳು ಕಟ್ಟಿಕೊಳ್ಳಬೇಕೆಂಬ ಕನಸಿನಲ್ಲಿದ್ದ. ಆದರೆ ತನ್ನ ಪ್ರೇಯಸಿ...

ನಾಗಪುರ: ಪ್ರೀತಿಯ ಗುಂಗಿನಲ್ಲಿ ಮುಳುಗಿದ್ದ ಪ್ರಿಯಕರನೊಬ್ಬ ತನ್ನ ಪ್ರಿಯತಮೆ ಜೊತೆ ಮದುವೆಯಾಗಿ ಬಾಳು ಕಟ್ಟಿಕೊಳ್ಳಬೇಕೆಂಬ ಕನಸಿನಲ್ಲಿದ್ದ. ಆದರೆ ತನ್ನ ಪ್ರೇಯಸಿ ಇನ್ನೊಬ್ಬನೊಂದಿಗೆ ಚಕ್ಕಂದವಾಡುತ್ತಿದ್ದಾಳೆನೋ ಎಂಬ ಅನುಮಾನದ ಮೇಲೆ ಆಕೆಯ ಮುಖವನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿದ್ದಾನೆ. 
ಮಹಾರಾಷ್ಟ್ರದ ನಾಗಪುರದ ನಿವಾಸಿ ಅಶ್ರಫ್ ಶೇಕ್ ಮಾಡೆಲ್ ಖುಷಿ ಪರಿಹಾರ್ ಳನ್ನು ಪ್ರೀತಿಸುತ್ತಿದ್ದ. ಇನ್ನೇನು ಮದುವೆಯಾಗಬೇಕು ಎಂದುಕೊಂಡಿದ್ದ ಅಶ್ರಫ್ ಗೆ ಖುಷಿ ಮೇಲೆ ಅನುಮಾನ ಬಂದಿದೆ. ಆಕೆಯ ವರ್ತನೆ ಬದಲಾಗಿದ್ದಕ್ಕೆ ಮೊದಲಿಗೆ ಅಶ್ರಫ್ ಆಕ್ಷೇಪಿಸುತ್ತಾ ಬಂದಿದ್ದ ಇದರಿಂದ ಇಬ್ಬರ ನಡುವೆ ಸದಾ ಜಗಳವಾಗುತ್ತಿತ್ತು. 
ಆದರೆ ಶನಿವಾರ ಮಾತ್ರ ಖುಷಿಗೆ ಕೊನೆಯ ದಿನವಾಗಿತ್ತು. ಜಗಳದ ನಂತರ ಇಬ್ಬರು ಸುಮ್ಮನಾಗಿದ್ದಾರೆ. ಬಳಿಕ ಕಾರಿನಲ್ಲಿ ಇಬ್ಬರು ತೆರಳಿದ್ದಾರೆ. ಪಂಡುರ್ನಾ-ನಾಗ್ಪುರ ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ಸಾವ್ಲಿ ಫತಾ ಎಂಬ ನಿರ್ಜನ ಪ್ರದೇಶದಲ್ಲಿ ಅಶ್ರಫ್ ಕಾರು ನಿಲ್ಲಿಸಿದ್ದಾನೆ. 
ಬಳಿಕ ಆಕೆಯ ಜೊತೆ ಮತ್ತೆ ಜಗಳವಾಡಿ ಆಕೆಯನ್ನು ಕೆಳಕ್ಕೆ ಕೆಡವಿ ಕಲ್ಲಿನಿಂದ ಮುಖವನ್ನು ಜಜ್ಜಿ ಕೊಲೆ ಮಾಡಿ ಬಂದಿದ್ದಾನೆ. ನಂತರ ಶವವನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ತನಿಖೆ ಕೈಗೊಂಡ ಪೊಲೀಸರಿಗೆ ಮೃತ ಮಹಿಳೆ ಖುಷಿ ಮಾಡೆಲ್ ಎಂದು ತಿಳಿದುಬಂದಿದೆ. ಇದೇ ವಿಚಾರವಾಗಿ ಅಶ್ರಫ್ ನನ್ನು ವಿಚಾರಣೆ ನಡೆಸಿದಾಗ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT