ನವದೆಹಲಿ: ಮಾಜಿ ಪ್ರಧಾನಿ ಚಂದ್ರಶೇಖರ್ ಅವರ ಪುತ್ರ ನೀರಜ್ ಶೇಖರ್ ಅವರು ಮಂಗಳವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.
ನಿನ್ನೆಯಷ್ಟೇ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಮಾಜವಾದಿ ಪಕ್ಷದ ನಾಯಕ ನೀರಜ್ ಶೇಖರ್ ಅವರು ಇಂದು ಬಿಜೆಪಿ ಸೇರಿದ್ದಾರೆ.
ದೆಹಲಿಯ ಬಿಜೆಪಿ ಕಚೇರಿಯಲ್ಲಿ, ಪ್ರಧಾನ ಕಾರ್ಯದರ್ಶಿ ಭುಪೇಂದರ್ ಯಾದವ್ ಅವರ ಸಮ್ಮುಖದಲ್ಲಿ ನೀರಜ್ ಶೇಖರ್(50) ಬಿಜೆಪಿ ಸೇರ್ಪಡೆಯಾದವರು. ಅವರು ಸೋಮವಾರ ರಾಜ್ಯಸಭಾ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ರಾಜೀನಾಮೆ ಸಲ್ಲಿಸಿದ್ದರು. ಮಂಗಳವಾರ ಬೆಳಗ್ಗೆ ವೆಂಕಯ್ಯ ನಾಯ್ಡು ಅವರು ರಾಜೀನಾಮೆ ಸ್ವೀಕೃತವಾಗಿರುವುದಾಗಿ ಘೋಷಿಸಿದರು. ನಂತರ, ಶೇಖರ್ ಅವರು ಬಿಜೆಪಿ ಮುಖ್ಯಸ್ಥ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು.