ಗರಿಮಾ ಅಬ್ರೋಲ್ 
ದೇಶ

ಮಿರಾಜ್ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದ ಪೈಲಟ್ ಪತ್ನಿ ವಾಯುಪಡೆ ಸೇರ್ಪಡೆ ಸಾಧ್ಯತೆ

ಮಿರಾಜ್ 2000 ಯುದ್ಧ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದ ಸ್ಕ್ವಾಡ್ರನ್ ಲೀಡರ್ ಸಮೀರ್ ಅಬ್ರೋಲ್ ಅವರ ಪತ್ನಿ ಗರೀಮಾ ಅಬ್ರೋಲ್ ತೆಲಂಗಾಣದಲ್ಲಿನ ಭಾರತೀಯ ವಾಯುಪಡೆ ಅಕಾಡೆಮಿ ಸೇರ್ಪಡೆಯಾಗುವ ಸಾಧ್ಯತೆ ಇದೆ.

ನವದೆಹಲಿ: ಮಿರಾಜ್ 2000 ಯುದ್ಧ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದ ಸ್ಕ್ವಾಡ್ರನ್  ಲೀಡರ್ ಸಮೀರ್ ಅಬ್ರೋಲ್ ಅವರ ಪತ್ನಿ ಗರೀಮಾ ಅಬ್ರೋಲ್  ವಾರಾಣಸಿಯಲ್ಲಿ ಸೇವಾ ಆಯ್ಕೆ ಮಂಡಳಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ತೆಲಂಗಾಣದಲ್ಲಿನ ಭಾರತೀಯ ವಾಯುಪಡೆ ಅಕಾಡೆಮಿ ಸೇರ್ಪಡೆಯಾಗುವ ಸಾಧ್ಯತೆ ಇದೆ.
ಈ ವರ್ಷ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಮಿರಾಜ್ 200 ಯುದ್ಧ ವಿಮಾನ ಪರೀಕ್ಷಾರ್ಥ ಹಾರಾಟ ಸಂದರ್ಭದಲ್ಲಿ ಸ್ಕ್ವಾಡ್ರನ್ ಲೀಡರ್ ಸಮೀರ್ ಅಬ್ರೋಲ್ ಹಾಗೂ ಸಿದ್ದಾರ್ಥ ನೇಗಿ ಮೃತಪಟ್ಟಿದ್ದರು.
ವಿಮಾನ ಟೇಕಾಪ್ ಆದ ನಂತರ ಲ್ಯಾಡಿಂಗ್  ಪ್ರಯತ್ನ ವಿಫಲಗೊಂಡು,  ವಿಮಾನದ ಮುಂಭಾಗ ಮುರಿದು ರನ್ ವೇ ಬಳಿಯಲ್ಲಿ ವಿಮಾನ ಅಪಘಾತಕ್ಕೀಡಾಗಿತ್ತು ಎಂಬುದು ವಾಯುಪಡೆಯ ಪ್ರಾಥಮಿಕ ವರದಿಗಳಿಂದ ತಿಳಿದುಬಂದಿತ್ತು.
ಆದಾಗ್ಯೂ, ಈ ದುರಂತದ ಬಗ್ಗೆ ತನಿಖೆ ನಡೆಸಬೇಕೆಂದು ಸಮೀರ್ ಅಬ್ರೋಲ್ ಅವರ ಸಹೋದರ ಸುಶಾಂತ್ ಅಬ್ರೋಲ್  ಕೇಂದ್ರಸರ್ಕಾರವನ್ನು ಒತ್ತಾಯಿಸಿದ್ದರು.
ಇಂತಹ ಪ್ರಕರಣಗಳು ಮರುಕಳಿಸಬಾರದು, ನನ್ನ ಪತಿ ಸಾವಿಗೆ ನ್ಯಾಯ ಸಿಗಬೇಕು, ಘಟನೆಗೆ ಕಾರಣರಾದವರ ಮೇಲೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗರೀಮಾ ಸಿಂಗ್  ಒತ್ತಾಯಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT