ಹಫೀಜ್ ಸಯೀದ್ 
ದೇಶ

ಹಫೀಜ್ ಬಂಧನ: ಪಾಕಿಸ್ತಾನ ಜಗತ್ತನ್ನು ಮೂರ್ಖನನ್ನಾಗಿಸುತ್ತಿದೆ ಎಂದ ಉಜ್ವಲ್ ನಿಕಮ್

ಮುಂಬೈ ಉಗ್ರ ದಾಳಿಯ ರೂವಾರಿ ಹಾಗೂ ನಿಷೇಧಿತ ಜಾಮತ್‌ ಉದ್ ದಾವಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್‌ನನ್ನು ಬಂಧಿಸುವ ಮೂಲಕ ಪಾಕಿಸ್ತಾನ...

ಮುಂಬೈ: ಮುಂಬೈ ಉಗ್ರ ದಾಳಿಯ ರೂವಾರಿ ಹಾಗೂ ನಿಷೇಧಿತ ಜಾಮತ್‌ ಉದ್ ದಾವಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್‌ನನ್ನು ಬಂಧಿಸುವ ಮೂಲಕ ಪಾಕಿಸ್ತಾನ ಜಗತ್ತನ್ನು ಮೂರ್ಖನನ್ನಾಗಿ ಮಾಡುತ್ತಿದೆ ಎಂದು ಮುಂಬೈ ಉಗ್ರ ದಾಳಿ ಪ್ರಕರಣದ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕಮ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಫೀಜ್ ಸಯೀದ್ ಬಂಧನ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ನಿಕಮ್ ಅವರು, ಪಾಕಿಸ್ತಾನ ಜಗತ್ತನ್ನು ಮೂರ್ಖನನ್ನಾಗಿ ಮಾಡುತ್ತಿದೆ. ಅವರು ಕೋರ್ಟ್ ಗೆ ಯಾವ ಸಾಕ್ಷ್ಯಗಳನ್ನು ನೀಡುತ್ತಾರೆ ಎಂಬುದನ್ನು ನಾವು ನೋಡಬೇಕಿದೆ ಮತ್ತು ಮುಂಬೈ ದಾಳಿ ಪ್ರಕರಣದಲ್ಲಿ ಆತನನ್ನು ತಪ್ಪಿತಸ್ಥನನ್ನಾಗಿ ಮಾಡಲು ಪಾಕ್ ಏನು ಕ್ರಮ ಕೈಗೊಂಡಿದೆ ಎಂಬುದನ್ನು ಬಹಿರಂಗಪಡಿಸಬೇಕು. ಇಲ್ಲದಿದ್ದರೆ ಇದು ಬರೀ ನಾಟಕ ಎಂದು ಟೀಕಿಸಿದ್ದಾರೆ.
ಹಫೀಜ್ ಸಯೀದ್‌ನನ್ನು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಭಯೋತ್ಪಾದನೆ ನಿಗ್ರಹ ದಳ ಇಂದು ಬಂಧಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪಾಕ್ ಅಧಿಕಾರಿಗಳು ತಿಳಿಸಿದ್ದಾರೆ.
ಗರಿಷ್ಠ ಭದ್ರತೆಯ ಕೋಟ್ ಲಖ್‌ಪತ್ ಜೈಲಿಗೆ ಸಯೀದ್‌ನನ್ನು ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಛತ್ತೀಸಗಢ: IED ಸ್ಫೋಟದಲ್ಲಿ ನಾಲ್ವರು ಯೋಧರು ಹುತಾತ್ಮ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ!

ಶೃಂಗೇರಿ ವಿಧಾನಸಭಾ ಚುನಾವಣೆ ಮರು ಎಣಿಕೆ: Congress ಅಭ್ಯರ್ಥಿ ಟಿಡಿ ರಾಜೇಗೌಡಗೆ ಗೆಲುವು!

ಹಾರ್ಮುಜ್ ಜಲಸಂಧಿ ಮೂಲಕ ತೆರಳಲು ಇರಾನ್‌ಗೆ ಹಣ ಪಾವತಿಸಿದರೆ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ; ಅಮೆರಿಕ ಎಚ್ಚರಿಕೆ

ಪಾಕ್‌ನಲ್ಲಿ ಧುರಂಧರರ ಆರ್ಭಟ: ಮೊನ್ನೆ ಜೈಶ್ ಉಗ್ರ, ನಿನ್ನೆ ಹಿಜ್ಬುಲ್ ಟಾಪ್ ಕಮಾಂಡರ್‌ಗೆ ಗುಂಡಿಟ್ಟು ಹತ್ಯೆ!

'ನಾನು ಅಷ್ಟು ಹೆದರಿದ್ದೆ': ವೈಭವ್ ಸೂರ್ಯವಂಶಿ ಮುಂದೆ ಅತಿರೇಕದ ಸಂಭ್ರಮಾಚರಣೆಗೆ ಉತ್ತರ ಕೊಟ್ಟ ಕೈಲ್ ಜೇಮಿಸನ್, Video!

SCROLL FOR NEXT