ಸಂಗ್ರಹ ಚಿತ್ರ 
ದೇಶ

2023 ಏಪ್ರಿಲ್ ನಲ್ಲಿ ಭಾರತೀಯ ಸೇನೆಯ ಬತ್ತಳಿಕೆಗೆ ರಷ್ಯಾದ ಅತ್ಯಂತ ವಿಧ್ವಂಸಕ S-400 ಕ್ಷಿಪಣಿ ವ್ಯವಸ್ಥೆ!

ರಷ್ಯಾ ಸೇನೆಯ ಅತ್ಯಂತ ವಿಧ್ವಂಸಕ ಕ್ಷಿಪಣಿ ವ್ಯವಸ್ಥೆ ಎಂದೇ ಕರೆಯಲಾಗುವ ಎಸ್-400 ಟ್ರಯಂಫ್ ಕ್ಷಿಪಣಿ ವ್ಯವಸ್ಥೆ 2023ರ ಏಪ್ರಿಲ್ ನಲ್ಲಿ ಭಾರತೀಯ ಸೇನೆಯ ಬತ್ತಳಿಕೆ ಸೇರಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ನವದೆಹಲಿ: ರಷ್ಯಾ ಸೇನೆಯ ಅತ್ಯಂತ ವಿಧ್ವಂಸಕ ಕ್ಷಿಪಣಿ ವ್ಯವಸ್ಥೆ ಎಂದೇ ಕರೆಯಲಾಗುವ ಎಸ್-400 ಟ್ರಯಂಫ್ ಕ್ಷಿಪಣಿ ವ್ಯವಸ್ಥೆ 2023ರ ಏಪ್ರಿಲ್ ನಲ್ಲಿ ಭಾರತೀಯ ಸೇನೆಯ ಬತ್ತಳಿಕೆ ಸೇರಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಗೃಹ ಸಚಿವಾಲಯದ ಕಾರ್ಯದರ್ಶಿ ಶ್ರೀಪಾದ್ ನಾಯಕ್ ಅವರು, ಈ ಕುರಿತಂತೆ ಬುಧವಾರ ಲೋಕಸಭೆಗೆ ಮಾಹಿತಿ ನೀಡಿದರು. ರಷ್ಯಾ ಮತ್ತ ಭಾರತದ ನಡುವೆ ಏರ್ಪಟ್ಟಿರುವ ಒಪ್ಪಂದದ ಅನ್ವಯ 2023ರ ಏಪ್ರಿಲ್ ವೇಳೆಗೆ ಮೊದಲ ಹಂತದ ಎಸ್-400 ಟ್ರಯಂಫ್ ಕ್ಷಿಪಣಿ ವ್ಯವಸ್ಥೆ ಭಾರತದ ಕೈ ಸೇರಲಿದೆ. 2018ರ ಅಕ್ಟೋಬರ್ 5ರಂದು ಭಾರತ ಮತ್ತು ರಷ್ಯಾ ಈ ಕುರಿತ ಒಪ್ಪಂದಕ್ಕೆ ಸಹಿ ಹಾಕಿತ್ತು. ಈ ಒಪ್ಪಂದ ಸುಮಾರು 5.43 ಬಿಲಿಯನ್ ಡಾಲರ್ ಮೌಲ್ಯದ ಬೃಹತ್ ಒಪ್ಪಂದವಾಗಿದ್ದು, ಭಾರತ ಐದು S-400 ಕ್ಷಿಪಣಿ ವ್ಯವಸ್ಥೆ ಖರೀದಿಯ ಒಪ್ಪಂದ ಪತ್ರಗಳಿಗೆ ಸಹಿ ಹಾಕಿದೆ ಎಂದು ಹೇಳಿದರು.
ಇನ್ನು ಭಾರತ ಮತ್ತು ರಷ್ಯಾ ನಡುವಿನ ಬೃಹತ್ ರಕ್ಷಣಾ ಒಪ್ಪಂದಕ್ಕೆ ಈ ಹಿಂದೆ ಅಮೆರಿಕ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ರಷ್ಯಾದೊಂದಿಗಿನ ಒಪ್ಪಂದ ರದ್ದು ಮಾಡದಿದ್ದರೆ ಭಾರತದ ವಿರುದ್ಧ ನಿರ್ಬಂಧ ಹೇರುವ ಕುರಿತೂ ಅಮೆರಿಕ ಎಚ್ಚರಿಕೆ ನೀಡಿತ್ತು. ಆದರೆ ಅಮೆರಿಕದ ಬೆದರಿಕೆಗೆ ಜಗ್ಗದ ಭಾರತ ತನ್ನ ರಾಜತಾಂತ್ರಿಕ ನಡೆ ಮೂಲಕ ಅಮೆರಿಕವನ್ನು ಸಮಾಧಾನಿಸಿತ್ತು.
ಎಸ್-400 ಟ್ರಯುಂಫ್: ಏಕಕಾಲಕ್ಕೆ 72 ಕ್ಷಿಪಣಿ ಸಿಡಿಸುವ ಸಾಮರ್ಥ್ಯ, ಒಂದೇ ಬಾರಿಗೆ 36 ಟಾರ್ಗೆಟ್  ನಾಶ
ಇನ್ನು ರಷ್ಯಾದಿಂದ ಭಾರತ ಖರೀದಿಸುತ್ತಿರುವ ಎಸ್-400 ಟ್ರಯುಂಫ್ ಕ್ಷಿಪಣಿ ವ್ಯವಸ್ಥೆ, ಅತ್ಯಂತ ವಿಧ್ವಂಸಕವಾಗಿದ್ದು, ತನ್ನ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಏಕಕಾಲಕ್ಕೆ 72 ಕ್ಷಿಪಣಿ ಸಿಡಿಸುವ ಸಾಮರ್ಥ್ಯ,ಒಂದೇ ಬಾರಿಗೆ 36 ಟಾರ್ಗೆಟ್ ಗಳನ್ನು ನಾಶ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ದೀರ್ಘ ಮತ್ತು ಮಧ್ಯಮ ಶ್ರೇಣಿಯ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆ ವಾಯುಪಡೆಗೆ ಹೆಚ್ಚಿನ ಪ್ರಮಾಣದಲ್ಲಿ ಅಗತ್ಯವಿದ್ದು, ನಿಗೂಢ ವಿಮಾನ ಮತ್ತಿತರ ಯಾವುದೇ  ರೀತಿಯ ವೈಮಾನಿಕ ದಾಳಿಗಳನ್ನು ನಾಶಪಡಿಸುವಂತೆ ಈ ಕ್ಷಿಪಣಿ ವ್ಯವಸ್ಥೆಯನ್ನು ಅಭಿವೃದ್ದಿಪಡಿಸಲಾಗಿರುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT