ನರೇಂದ್ರ ಮೋದಿ 
ದೇಶ

ವಾರಣಾಸಿಯಿಂದ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಪ್ರಧಾನಿಗೆ ಹೈಕೋರ್ಟ್ ನೋಟಿಸ್

ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಅಲಹಬಾದ್...

ಅಲಹಬಾದ್: ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಅಲಹಬಾದ್ ಹೈಕೋರ್ಟ್, ಶುಕ್ರವಾರ ಪ್ರಧಾನಿಗೆ ನೋಟಿಸ್ ಜಾರಿ ಮಾಡಿದೆ.
ಮಾಜಿ ಬಿಎಸ್ ಎಫ್ ಯೋಧ ತೇಜ್ ಬಹದ್ದೂರ್ ಯಾಧವ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಕೆ.ಗುಪ್ತಾ ಅವರು, ಪ್ರಧಾನಿ ಮೋದಿಗೆ ನೋಟಿಸ್ ನೀಡಿ, ವಿಚಾರಣೆಯನ್ನು ಆಗಸ್ಟ್ 21ಕ್ಕೆ ಮುಂದೂಡಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ್ದ ತೇಜ್ ಬಹದ್ದೂರ್ ಯಾದವ್ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. ಭ್ರಷ್ಟಾಚಾರ ಆರೋಪದ ಮೇಲೆ ತಾವು ಬಿಎಸ್ಎಫ್ ನಿಂದ ವಜಾಗೊಂಡಿಲ್ಲ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸಲು ತೇಜ್ ಬಹದ್ದೂರ್ ವಿಫಲವಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ನಾಮಪತ್ತವನ್ನು ತಿರಸ್ಕರಿಸಲಾಗಿತ್ತು. ಆದರೆ ಚುನಾವಣಾ ಅಧಿಕಾರಿಗಳು ಉದ್ದೇಶಪೂರ್ವಕವಾಗಿಯೇ ತಮ್ಮ ನಾಮಪತ್ರ ತಿರಸ್ಕರಿಸಿದ್ದು, ಮೋದಿಯ ಆಯ್ಕೆಯನ್ನು ಅಮಾನ್ಯಗೊಳಿಸಬೇಕು ಎಂದು ಕೋರಿ ಕೋರ್ಟ್ ಮೊರೆ ಹೋಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್