ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ವಾತಂತ್ರ್ಯೋತ್ಸವ ಭಾಷಣಕ್ಕೆ ಜನರಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ.
ಆಗಸ್ಟ್ 15ರಂದು ಕೆಂಪು ಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ತಾವು ಮಾಡುವ ಭಾಷಣಕ್ಕೆ ಜನರಿಂದ ಸಲಹೆಗಳನ್ನು ಕೇಳಿರುವ ಪ್ರಧಾನಿ ಮೋದಿ ಅವರು, ಇದು ಜನ ಸಾಮಾನ್ಯರು ವಿಚಾರಗಳನ್ನು ಈಡೀ ದೇಶಕ್ಕೆ ತಿಳಿಸಲು ಅವಕಾಶ ಕಲ್ಪಿಸಲಿದೆ ಎಂದು ಹೇಳಿದ್ದಾರೆ.
ಆಗಸ್ಟ್ 15ರ ನನ್ನ ಭಾಷಣಕ್ಕೆ ನಿಮ್ಮ ಅಮೂಲ್ಯವಾದ ವಿಚಾರಗಳನ್ನು ನಾನು ಆಹ್ವಾನಿಸುತ್ತಿದ್ದೇನೆ. ನಿಮ್ಮ ವಿಚಾರಗಳನ್ನು ದೇಶದ 130 ಕೋಟಿ ಜನ ಆಲಿಸಲಿದ್ದಾರೆ ಎಂದು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ಜನರಿಂದ ಸಲಹೆಗಳನ್ನು ಸ್ವೀಕರಿಸಲು ನಮೋ ಆ್ಯಪ್ "ಓಪನ್ ಫೋರಮ್" ಸೃಷ್ಟಿ ಮಾಡಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos