ಹಿಮಚರಣ್ 
ದೇಶ

ತೆಲಂಗಾಣ: ಬಾಲಕಿ ವಿರುದ್ಧ ಸೋಲು, 8ನೇ ತರಗತಿ ವಿದ್ಯಾರ್ಥಿ ಬಲಿ ಪಡೆದ ಶಾಲಾ ಚುನಾವಣೆ!

8ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಶಾಲೆಯಲ್ಲಿ ತಾನು ನಾಯಕನಾಗಿ ಆಯ್ಕೆಯಾಗಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ದಾರುಣ...

ನಲಗೊಂಡ: 8ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಶಾಲೆಯಲ್ಲಿ ತಾನು ನಾಯಕನಾಗಿ ಆಯ್ಕೆಯಾಗಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತೆಲಂಗಾಣದ ನಲಗೊಂಡದಲ್ಲಿ ನಡೆದಿದೆ.
13 ವರ್ಷದ ಬಾಲಕ ಹಿಮಚರಣ್ ಮೃತದೇಹ ರೈಲ್ವೆ ಹಳಿ ಮೇಲೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಾಲಾ ನಾಯಕನ ಆಯ್ಕೆ ಸಂಬಂಧ ಸರ್ಕಾರಿ ಶಾಲೆಯಲ್ಲಿ ಜೂನ್ ನಲ್ಲಿ ನಡೆದ ಚುನಾವಣೆಯ ಫಲಿತಾಂಶ ಮೂರು ದಿನಗಳ ಹಿಂದೆ ಪ್ರಕಟವಾಗಿದ್ದು, ಹಿಮಚರಣ್ ತನ್ನ ಸಹಪಾಠಿ, ಪ್ರತಿಸ್ಪರ್ಧಿ ಬಾಲಕಿಯ ವಿರುದ್ಧ ಸೋಲು ಅನುಭವಿಸಿದ್ದನು. ಆದರೆ ಎರಡನೇ ಸ್ಥಾನದಲ್ಲಿದ್ದ ಹಿಮಚರಣ್ ರನ್ನು ಸಹಾಯಕ ನಾಯಕ ಎಂದು ಆಯ್ಕೆ ಮಾಡಲಾಗಿತ್ತು.
ನಂತರ ಹುಡುಗಿ ವಿರುದ್ಧ ಸೋತು ಬಿಟ್ಟೆ ಎಂದು ಹಿಮಚರಣ್ ಸ್ನೇಹಿತರು ಕಿಚಾಯಿಸಲು ಆರಂಭಿಸಿದ್ದರು. ಇದರಿಂದ ನೊಂದ ಹಿಮಚರಣ ಗುರುವಾರ ಶಾಲೆಯಿಂದ ವಾಪಸ್ ಮನೆಗೆ ಬಂದು, ಬ್ಯಾಗ್ ಮನೆಯಲ್ಲಿಟ್ಟು ಹೊರಗಡೆ ಹೋಗಿದ್ದಾನೆ. ರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಆತಂಕಗೊಂಡ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 
ಈ ಸಂಬಂಧ ನಲಗೊಂಡ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ