ನಿತಿನ್ ಗಡ್ಕರಿ 
ದೇಶ

ಬ್ಯಾಂಕಿಂಗ್ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ- ನಿತಿನ್ ಗಡ್ಕರಿ

ಬ್ಯಾಂಕಿಂಗ್ ಕ್ಷೇತ್ರವು ವಿವಿಧ ರಂಗಗಳಲ್ಲಿ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ನಾಗಪುರ: ಬ್ಯಾಂಕಿಂಗ್ ಕ್ಷೇತ್ರವು ವಿವಿಧ ರಂಗಗಳಲ್ಲಿ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದೆ ಎಂದು ಕೇಂದ್ರ  ಹೆದ್ದಾರಿ ಮತ್ತು ರಸ್ತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಪಾರದರ್ಶಕತೆಯನ್ನು ಖಾತರಿಪಡಿಸುವುದು ಮತ್ತು ಠೇವಣಿಗಳ ಮೇಲಿನ ಆದಾಯವನ್ನು ನೀಡುವುದು ಬ್ಯಾಂಕಿಂಗ್ ಕ್ಷೇತ್ರದ ಮುಂದೆ ಪ್ರಮುಖ ಸವಾಲಾಗಿದೆ ಎಂದಿದ್ದಾರೆ.
ಇಂಡಿಯನ್ ಬ್ಯಾಂಕ್ ವಲಯ ಕಚೇರಿ ಉದ್ಘಾಟನೆ ನಂತರ ಮಾತನಾಡಿದ ಅವರು,  ಜನರು ಕೂಡಾ ಬಾಕಿಯನ್ನು ನಿಗದಿತ ವೇಳೆಗೆ ಪಾವತಿಸಬೇಕು ಎಂದರು.
ಎಎಸ್ ಎಂಇಗಳಿಗೆ 59 ನಿಮಿಷಗಳಲ್ಲಿ ಸಾಲ ದೊರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.  ಈ ವ್ಯಜಿಎಸ್ ಟಿ ಮತ್ತು ಆದಾಯ ತೆರಿಗೆಗೂ ಇದನ್ನು ಸೇರ್ಪಡೆ ಮಾಡಲಾಗುವುದು, ಉತ್ತಮ ದಾಖಲೆಯನ್ನು ಹೊಂದಿರುವವರು ಸಾಲಗಳನ್ನು ತ್ವರಿತಗತಿಯಲ್ಲಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಎಂಎಸ್ ಎಂಇ ಕ್ಷೇತ್ರದಲ್ಲಿ ಪ್ರಗತಿ ಹಾಗೂ ಉದ್ಯೋಗವಕಾಶಗಳ ಸೃಷ್ಟಿ ಹಿನ್ನೆಲೆಯಲ್ಲಿ  ಕೈ ಮಗ್ಗ ಮತ್ತು ಕರಕುಶಲ  ಉದ್ಯಮಗಳನ್ನು ಪ್ರೋತ್ಸಾಹಿಸಬೇಕಾದ ಅಗತ್ಯವಿದೆ. ಗ್ರಾಮೀಣ ಪ್ರದೇಶದಲ್ಲಿ ಸೋಲಾರ್ ಚರಕ ಕ್ಲಸ್ಟರ್  ಮೂಲಕ ಮಹಿಳೆಯರು, ಯುವಕರ ಉದ್ಯೋಗ ಹಾಗೂ ಸುಸ್ಥಿರ ಅಭಿವೃದ್ಧಿಗಾಗಿ ಪ್ರಯತ್ನಿಸಲಾಗುತ್ತಿದೆ ಎಂದು ನಿತಿನ್ ಗಡ್ಕರಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT