ಟ್ರಕ್ ಗೆ ಕಾರು ಡಿಕ್ಕಿ 
ದೇಶ

ಟ್ರಕ್ ಗೆ ಕಾರು ಡಿಕ್ಕಿ: ಭೀಕರ ಅಪಘಾತದಲ್ಲಿ 9ಮಂದಿ ಕಾಲೇಜು ವಿದ್ಯಾರ್ಥಿಗಳ ದುರ್ಮರಣ

ಟ್ರಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 9 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಪುಣೆ-ಸೊಲ್ಲಾಪುರ ಹೆದ್ದಾರಿಯಲ್ಲಿ ಬರುವ ಕದಂವಕ್​ ವಸ್ತಿ ಗ್ರಾಮದ ...

ಪುಣೆ: ಟ್ರಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 9 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಪುಣೆ-ಸೊಲ್ಲಾಪುರ ಹೆದ್ದಾರಿಯಲ್ಲಿ ಬರುವ ಕದಂವಕ್​ ವಸ್ತಿ ಗ್ರಾಮದ ಬಳಿ ನಡೆದಿದೆ.
ಪುಣೆ-ಸೊಲ್ಲಾಪುರ ಹೆದ್ದಾರಿಯಲ್ಲಿ ಬರುವ ಕದಂವಕ್​ ವಸ್ತಿ ಗ್ರಾಮದ ಬಳಿ ಈ ಅಪಘಾತ ನಡೆದಿದೆ. ಶುಕ್ರವಾರ ತಡರಾತ್ರಿ ಮತ್ತು ಟ್ರಕ್​ ಮುಖಾಮುಖಿ ಡಿಕ್ಕಿಯಾಗಿವೆ. 
ಅಕ್ಷಯ್​ ಭರತ್​ ವೈಕರ್​, ವಿಶಾಲ್​ ಸುಭಾಷ್​ ಯಾದವ್​, ನಿಖಿಲ್​ ಚಂದ್ರಕಾಂತ್​, ನೂರ್​ ಮಹಮ್ಮದ್​ ಅಬ್ಬಾಸ್​ ದಯಾ, ಪರ್ವೇಜ್​ ಅತ್ತರ್​, ಶುಭಂ ರಾಮ್​ದಾಸ್​ ಭಿಸೆ, ಅಕ್ಷಯ್​ ಚಂದ್ರಕಾಂತ್​, ದತ್ತ ಗಣೇಶ್​ ಯಾದವ್​, ಜುಬೇರ್ ಅಜೀಜ್ ಮುಲಾನಿ ಮೃತರು. ಪುಣೆಯ ಯಾವತ್​ ಗ್ರಾಮದವರಾದ ಇವರೆಲ್ಲರೂ ಕಾಲೇಜು ವಿದ್ಯಾರ್ಥಿಗಳು.
ಇವರೆಲ್ಲ ರಾಯಗಢಕ್ಕೆ ಪ್ರವಾಸಕ್ಕೆ ತೆರಳಿ ಪುಣೆಗೆ ಮರಳುವಾಗ ಅಪಘಾತ ಸಂಭವಿಸಿದೆ. ಕಾರು ಡಿವೈಡರ್​ ಬಳಿ ಜಂಪ್​ ಆಗಿದೆ. ಅದೇ ಸಮಯಕ್ಕೆ ಪುಣೆ ಕಡೆಯಿಂದ ಬರುತ್ತಿದ್ದ ಬರುತ್ತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಪುಣೆ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT