ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಅವರ ಬೆಂಬಲಿಗರನ್ನು ವಶಕ್ಕೆ ತೆಗೆದುಕೊಂಡ ನಂತರ ಅತಿಥಿ ಗೃಹದಲ್ಲಿ ರಾತ್ರಿ ಕಳೆದ ಚಿತ್ರ 
ದೇಶ

ಗುಂಡಿನ ದಾಳಿಗೆ ಬಲಿಯಾದವರ ಕುಟುಂಬಸ್ಥರನ್ನು ಭೇಟಿ ಮಾಡುವವರೆಗೆ ಈ ಜಾಗ ಬಿಟ್ಟು ಹೋಗುವುದಿಲ್ಲ: ಪ್ರಿಯಾಂಕಾ ಗಾಂಧಿ ಪಟ್ಟು

ಭೂಮಿ ಬಿಟ್ಟುಕೊಡಲು ನಿರಾಕರಿಸಿದ 10 ಆದಿವಾಸಿ ರೈತರ ಮೇಲೆ ಗುಂಡು ಹಾರಿಸಿದ ...

ಮಿರ್ಜಾಪುರ(ಉತ್ತರ ಪ್ರದೇಶ): ಭೂಮಿ  ಬಿಟ್ಟುಕೊಡಲು ನಿರಾಕರಿಸಿದ 10 ಆದಿವಾಸಿ ರೈತರ ಮೇಲೆ ಗುಂಡು ಹಾರಿಸಿದ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಸ್ಥರು ಮತ್ತು ಗಾಯಗೊಂಡವರನ್ನು ಭೇಟಿ ಮಾಡಲು ಸೋನಭದ್ರಕ್ಕೆ ಆಗಮಿಸಿದ ವೇಳೆ ಪೊಲೀಸರು ತಮ್ಮನ್ನು ತಡೆದಿದ್ದಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅತಿಥಿ ಗೃಹದಲ್ಲಿ ರಾತ್ರಿಯಿಡೀ ಕಳೆದು ಪ್ರತಿಭಟನೆ ನಡೆಸಿದ್ದಾರೆ.
ನಿನ್ನೆ ನಾರಾಯಣಪುರದಲ್ಲಿ ಪ್ರಿಯಾಂಕಾ ವಾದ್ರಾ ಅವರನ್ನು ಪೊಲೀಸರು ತಡೆದಿದ್ದು ಇದನ್ನು ಪ್ರತಿಭಟಿಸಿ ಚುನಾರ್ ಅತಿಥಿ ಗೃಹದಲ್ಲಿ ಕಳೆದರು.
ಅತಿಥಿಗೃಹದಲ್ಲಿ ಹವಾ ನಿಯಂತ್ರಿತ ಕೊಠಡಿಯಿಲ್ಲ ಎಂದು ಹೇಳಿ ವಾರಣಾಸಿಗೆ ಕಳುಹಿಸಲು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳನ್ನು ಪ್ರಿಯಾಂಕಾ ಅವರನ್ನು ಭೇಟಿ ಮಾಡಿ ಮನವೊಲಿಸಲು ಪ್ರಯತ್ನಿಸಿ ವಿಫಲರಾದರು. ಗುಂಡಿನ ದಾಳಿಗೆ ಬಲಿಯಾದವರ ಕುಟುಂಬಸ್ಥರನ್ನು ಭೇಟಿ ಮಾಡುವವರೆಗೆ ಸ್ಥಳ ಬಿಟ್ಟು ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ನಿನ್ನೆ ರಾತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಉಳಿದುಕೊಂಡಿದ್ದ ಅತಿಥಿ ಗೃಹದಲ್ಲಿ ರಾತ್ರಿ 10 ಗಂಟೆ ವೇಳೆಗೆ ವಿದ್ಯುತ್ ನಿಲುಗಡೆಯಾಯಿತು. ನಂತರ ಕಾಂಗ್ರೆಸ್ ಕಾರ್ಯಕರ್ತರೆಲ್ಲಾ ಒಟ್ಟು ಸೇರಿ ಹಣ ಸಂಗ್ರಹಿಸಿ ಬಾಡಿಗೆಗೆ ಜನರೇಟರ್ ತಂದರು. 
ಇಂದು ಕೂಡ ಧರಣಿ ಮುಂದುವರಿಸಿರುವ ಪ್ರಿಯಾಂಕಾ ಗಾಂಧಿ, ನಾವಿಲ್ಲಿ ಧರಣಿ ಕುಳಿತು 24 ಗಂಟೆಯಾಗಿದೆ. ಸೋನಭದ್ರ ಗುಂಡಿನ ದಾಳಿಗೆ ಬಲಿಯಾದವರ ಕುಟುಂಬಸ್ಥರನ್ನು ಭೇಟಿ ಮಾಡಲು ಅವಕಾಶ ನೀಡುವವರೆಗೆ ನಾನು ಈ ಜಾಗ ಬಿಟ್ಟು ಹೋಗುವುದಿಲ್ಲ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ಇರಾಕ್‌ನಲ್ಲಿ ಅಮೆರಿಕಾದ KC-135 ಸೇನಾ ವಿಮಾನ ಪತನ; ರಕ್ಷಣಾ ಕಾರ್ಯಾಚರಣೆ ಆರಂಭ

ಕಲಬುರಗಿಯಲ್ಲಿ ಪತ್ತೆಯಾದ ಪ್ರಾಚೀನ ಬೌದ್ಧ ಮಠದ ವಿಸ್ತೃತ ಉತ್ಖನನ ಕೈಗೊಳ್ಳಿ: ಕೇಂದ್ರಕ್ಕೆ ಖರ್ಗೆ ಒತ್ತಾಯ

ಆಪರೇಷನ್‌ ಕಮಲದ ಆತಂಕ: ಅಸ್ಸಾಂ ಕಾಂಗ್ರೆಸ್‌ ಶಾಸಕರು ಬಿಡದಿ ರೆಸಾರ್ಟ್‌ಗೆ ಶಿಫ್ಟ್‌; ಅಖಾಡಕ್ಕಿಳಿದ ಡಿಕೆ ಶಿವಕುಮಾರ್

ರಾಜ್ಯದ 470 ಹಳ್ಳಿಗಳಿಗೆ ಮೊಬೈಲ್ ನೆಟ್​ವರ್ಕೇ ಇಲ್ಲ..!

ಮೋದಿ ನಿಜವಾದ ಮುತ್ಸದ್ದಿ: ದೂರದೃಷ್ಟಿ ಹೊಂದಿರುವ ಅದ್ಭುತ ನಾಯಕ; ನಟ ಮೋಹನ್‌ ಲಾಲ್ ಶ್ಲಾಘನೆ

SCROLL FOR NEXT