ಮೋಹನ್ ಭಾಗವತ್ 
ದೇಶ

ಸಂಸ್ಕೃತ ಕಲಿತಿಲ್ಲದ ಬಗ್ಗೆ ಅಂಬೇಡ್ಕರ್ ಗೂ ವಿಷಾಧವಿತ್ತು- ಆರ್ ಎಸ್ ಎಸ್ ಮುಖ್ಯಸ್ಥ

ಸಂಸ್ಕೃತ ಭಾಷೆ ಗೊತ್ತಿಲ್ಲದೆ ಭಾರತವನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳುವುದು ಕಷ್ಟ ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ.

ನಾಗಪುರ: ಸಂಸ್ಕೃತ ಭಾಷೆ ಗೊತ್ತಿಲ್ಲದೆ ಭಾರತವನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳುವುದು ಕಷ್ಟ ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ.
ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬುಡುಕಟ್ಟು ಸಮುದಾಯದ ಭಾಷೆ ಸೇರಿದಂತೆ ದೇಶದಲ್ಲಿರುವ ಎಲ್ಲಾ ಭಾಷೆಗಳಲ್ಲೂ ಕನಿಷ್ಠ ಅಂದರೂ ಶೇಕಡಾ 30 ರಷ್ಟು ಸಂಸ್ಕೃತ ಪದಗಳಿರುತ್ತವೆ ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಕೂಡ ಸಂಸ್ಕೃತವನ್ನು ಕಲಿಯುವ ಅವಕಾಶ ಸಿಗಲಿಲ್ಲ ಎಂದು ವಿಷಾದಿಸಿದ ಅವರು, ದೇದ ಸಂಪ್ರದಾಯಗಳ ಬಗ್ಗೆ ಕಲಿಯಬೇಕಾಗುತ್ತದೆ ಎಂದರು. 
ದೇಶದಲ್ಲಿನ ಯಾವುದೇ ಭಾಷೆಗಳನ್ನು ಮೂರ್ನಾಲ್ಕು ತಿಂಗಳಲ್ಲಿ ಕಲಿಯಲು ಸಾಧ್ಯವಿಲ್ಲ. ಯಾವುದೇ ಭಾಷೆಗಳನ್ನು ಕಲಿಯಬೇಕಾದರೆ  ಬೇರೆಯವರು ಮಾತನಾಡುವಾಗ ಸ್ವಲ್ವವನ್ನು ಕೇಳಿಸಿಕೊಳ್ಳಬೇಕಾಗುತ್ತದೆ. ನಂತರ ಅರ್ಥ ಮಾಡಿಕೊಳ್ಳಲಾಗುತ್ತದೆ. ಸಂಸ್ಕೃತ ಸಂಪರ್ಕ ಭಾಷೆ ಎಂದು ಹೇಳಿದರು.
ಪ್ರಾಚೀನ ಕಾಲದ ಆಯುರ್ವೇದ, ಕೃಷಿ ಪದ್ಧತಿ ಎಲ್ಲವೂ ಸಂಸ್ಕೃತದಲ್ಲಿದ್ದು, ಆಧುನಿಕ ಪೂರ್ವ ಭಾರತದ ಇತಿಹಾಸವೆಲ್ಲವೂ ಸಂಸ್ಕೃತದಲ್ಲಿಯೇ ಇದೆ. ಆದ್ದರಿಂದ ಸಂಸ್ಕೃತ ಗೊತ್ತಿಲ್ಲದೆ ದೇಶವನ್ನು ಅರ್ಥಮಾಡಿಕೊಳ್ಳುವುದು ಕಷ್ಟು ಅಂಬೇಡ್ಕರ್ ಇದನ್ನು ಹೇಳಿದ್ದರು ಎಂದರು.
ಸಂಸ್ಕೃತ ಕಲಿತಿಲ್ಲದ ಬಗ್ಗೆ ಅಂಬೇಡ್ಕರ್ ಕೂಡಾ ವಿಷಾಧವಿದೆ ಎಂದು ಅಂಬೇಡ್ಕರ್ ಹೇಳಿದ್ದರು. ನಮ್ಮ ದೇಶ, ಜನರು ಹಾಗೂ ಸಂಸ್ಕೃತಿಯನ್ನು ತಿಳಿಯಬೇಕಾದರೆ ಪ್ರತಿಯೊಬ್ಬರು  ಸಂಸ್ಕೃತ ಕಲಿಯಬೇಕಾಗುತ್ತದೆ ಎಂದು ಮೋಹನ್ ಭಾಗವತ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ: ಸಿಎಂ ಆಪ್ತ ಗುಂಪಿನಿಂದ ಸ್ಪೋಟಕ ಸಂದೇಶ, ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

SCROLL FOR NEXT