ದೇಶ

ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಸಿಎಂ ಶೀಲಾ ದೀಕ್ಷಿತ್ ಅಂತಿಮ ಸಂಸ್ಕಾರ!

ನಿನ್ನೆ ನಿಧನರಾದ ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ದೆಹಲಿಯಲ್ಲಿ ನೆರವೇರಿದೆ.

ನವದೆಹಲಿ: ನಿನ್ನೆ ನಿಧನರಾದ ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ದೆಹಲಿಯಲ್ಲಿ ನೆರವೇರಿದೆ.
ನಿನ್ನೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ 81 ವರ್ಷದ ಶೀಲಾ ದೀಕ್ಷಿತ್ ಸಾವನ್ನಪ್ಪಿದ್ದರು.  ಇಂದು ಮಧ್ಯಾಹ್ನ ದೆಹಲಿಯ ನಿಗಂ ಬೋಧ್​ ಘಾಟ್ ನಲ್ಲಿ ಅಂತ್ಯಸಂಸ್ಕಾರ ನೆರವೇರಿದೆ. ಈ ವೇಳೆ ಪ್ರಧಾನಿ ನರೇಂದ್ರ  ಮೋದಿ, ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​, ಲೋಕಸಭೆ ಸ್ಪೀಕರ್​ ಓಂ ಬಿರ್ಲಾ, ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​, ಡಿಸಿಎಂ ಮನೀಶ್​ ಸಿಸೋಡಿಯಾ, ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಮನೋಜ್​ ತಿವಾರಿ, ಸೇರಿದಂತೆ ಹಲವು ರಾಜಕಾರಣಿಗಳು, ಗಣ್ಯರು ಮತ್ತು ಆತ್ಮೀಯರು ಮೃತರ ಮನೆಗೆ ತೆರಳಿ ಅಂತಿಮ ನಮನ ಸಲ್ಲಿಸಿದ್ದರು.
ಇದಕ್ಕೂ ಮೊದಲು ಕಾಂಗ್ರೆಸ್ ​ನ ಹಿರಿಯ ನಾಯಕರು ಶೀಲಾ ದೀಕ್ಷಿತ್​ ಅವರ ಮೃತದೇಹವನ್ನು ದೆಹಲಿಯ ನಿಜಾಮುದ್ದೀನ್​ ನಗರದಲ್ಲಿರುವ ಅವರ ಮನೆಗೆ ಕೊಂಡೊಯ್ದಿದ್ದರು. ಅವರ ಸ್ವಗೃಹದಲ್ಲಿ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕಾಗಿ ಇರಿಸಲಾಗಿತ್ತು.  ಬಳಿಕ ಇಂದು ಬೆಳಗ್ಗೆ ಕಾಂಗ್ರೆಸ್​ ಮುಖ್ಯ ಕಚೇರಿಗೆ ಶೀಲಾ ದೀಕ್ಷಿತ್ ಅವರ ಪಾರ್ಥೀವ ಶರೀರ ಕೊಂಡೊಯ್ದು ಕಾರ್ಯಕರ್ತರಿಗೆ ಮತ್ತು ನಾಯಕರಿಗೆ ದರ್ಶನಕ್ಕೆ ಅವಕಾ ಮಾಡಿಕೊಡಲಾಗಿತ್ತು. 
ಇನ್ನು ಶೀಲಾ ದೀಕ್ಷಿತ್ ನಿಧನದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಎರಡು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT