ಸಂಗ್ರಹ ಚಿತ್ರ 
ದೇಶ

ತಾಂತ್ರಿಕ ದೋಷ ನಿವಾರಣೆ, ಚಂದ್ರಯಾನ 2 ಉಡಾವಣೆಗೆ ಸಿದ್ಧ: ಇಸ್ರೋ ಮಾಜಿ ಮುಖ್ಯಸ್ಥ ಕಿರಣ್ ಕುಮಾರ್

ಭಾರತೀಯ ಹೆಮ್ಮೆಯ ಬಾಹ್ಯಾಕಾಶ ಯೋಜನೆ ಚಂದ್ರಯಾನ–2 ಯೋಜನೆಯ ತಾಂತ್ರಿಕ ದೋಷ ನಿವಾರಣೆಯಾಗಿದ್ದು, ನೌಕೆ ಸಂಪೂರ್ಣ ಸಿದ್ಧವಾಗಿದೆ ಎಂದು ಮಾಜಿ ಇಸ್ರೋ ಮುಖ್ಯಸ್ಥ ಕಿರಣ್ ಕುಮಾರ್ ಹೇಳಿದ್ದಾರೆ.

ಶ್ರೀಹರಿಕೋಟಾ: ಭಾರತೀಯ ಹೆಮ್ಮೆಯ ಬಾಹ್ಯಾಕಾಶ ಯೋಜನೆ ಚಂದ್ರಯಾನ–2 ಯೋಜನೆಯ ತಾಂತ್ರಿಕ ದೋಷ ನಿವಾರಣೆಯಾಗಿದ್ದು, ನೌಕೆ ಸಂಪೂರ್ಣ ಸಿದ್ಧವಾಗಿದೆ ಎಂದು ಮಾಜಿ ಇಸ್ರೋ ಮುಖ್ಯಸ್ಥ ಕಿರಣ್ ಕುಮಾರ್ ಹೇಳಿದ್ದಾರೆ.
ಈ ಕುರಿತಂತೆ ಸುದ್ದಿಸಂಸ್ಛೆಯೊಂದಿಗೆ ಮಾತನಾಡಿರುವ ಕಿರಣ್ ಕುಮಾರ್ ಅವರು, ಈ ಹಿಂದೆ ಕಾಣಿಸಿಕೊಂಡಿದ್ದ ಎಲ್ಲ ತಾಂತ್ರಿಕದೋಷಗಳನ್ನು ನಿವಾರಣೆ ಮಾಡಿದ್ದಷ್ಟೇ ಅಲ್ಲದೇ ಪ್ರಾಯೋಗಿಕ ಪರೀಕ್ಷೆ ಕೂಡ ನಡೆಸಲಾಗಿದೆ. ಎಲ್ಲ ಪರೀಕ್ಷೆಗಳೂ ಯಶಸ್ವಿಯಾಗಿದ್ದು, ನಾವು ಉಡಾವಣೆಗೆ ಸಿದ್ಧವಾಗಿದ್ದೇವೆ ಎಂದು ಹೇಳಿದ್ದಾರೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇಸ್ರೋ ಕೂಡ ಟ್ವೀಟ್ ಮಾಡಿದ್ದು, ಚಂದ್ರಯಾನ 2 ನೌಕೆಯನ್ನು ಹೊತ್ತು ನಭಕ್ಕೆ ಚಿಮ್ಮಲಿರುವ ರಾಕೆಟ್ ‘ಬಾಹುಬಲಿ’ ಸಮರ್ಥವಾಗಿದೆ.  ಚಂದ್ರಯಾನ–2 ಮಿಷನ್‌ನ ಉಡ್ಡಯನ ರಾಕೇಟ್‌ ನಲ್ಲಿನ ತಾಂತ್ರಿಕ ದೋಷವನ್ನು ಪರೀಕ್ಷಿಸಿ, ಸರಿಪಡಿಸಲಾಗಿದ್ದು, ಅದರ ಕಾರ್ಯಕ್ಷಮತೆ ಸಮರ್ಥವಾಗಿದೆ. ಉಡ್ಡಯನಕ್ಕೆ ಪೂರ್ವ ತಯಾರಿ ಪೂರ್ಣಗೊಂಡಿದೆ ಎಂದು ಟ್ವೀಟ್‌ ಮಾಡಿದೆ.
ಇದೇ 22ರಂದು ಚಂದ್ರಯಾನ–2 ಉಡ್ಡಯನ ಮಾಡಲು ಇಸ್ರೊ ನಿರ್ಧರಿಸಿದೆ. ಅಂದು ಮಧ್ಯಾಹ್ನ 2.43ಕ್ಕೆ ನೌಕೆಯನ್ನು ಹೊತ್ತ ರಾಕೆಟ್ ‘ಬಾಹುಬಲಿ’ ನಭಕ್ಕೆ ಚಿಮ್ಮಲಿದೆ.  
ಈ ಮುನ್ನ ಜುಲೈ 15ರಂದು ನೌಕೆ ಉಡ್ಡಯನಕ್ಕೆ ಯೋಜಿಸಲಾಗಿತ್ತು. ಆದರೆ ಉಡ್ಡಯನಕ್ಕೆ 56 ನಿಮಿಷಗಳು ಬಾಕಿ ಇರುವಾಗ ರಾಕೆಟ್‌ ನಲ್ಲಿ ತಾಂತ್ರಿಕ ದೋಷ ಕಂಡುಬಂದದ್ದರಿಂದ ರದ್ದುಪಡಿಸಲಾಗಿತ್ತು. ಇದಾದ ಮೂರು ದಿನಗಳ ಬಳಿಕ ಹೊಸ ದಿನಾಂಕವನ್ನು ಇಸ್ರೊ ಪ್ರಕಟಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT