ಸತ್ಯಪಾಲ್ ಮಲೀಕ್ 
ದೇಶ

ಕಾಶ್ಮೀರವನ್ನು ಲೂಟಿ ಮಾಡಿದ ಭ್ರಷ್ಟರನ್ನು ಹತ್ಯೆ ಮಾಡಿ: ಉಗ್ರರಿಗೆ ರಾಜ್ಯಪಾಲ ಸತ್ಯಪಾಲ್ ಮಲೀಕ್ ಕರೆ

ಕಾಶ್ಮೀರವನ್ನು ಲೂಟಿ ಮಾಡಿದವರನ್ನು ಹತ್ಯೆ ಮಾಡಿ ಎಂದು ಭಯೋತ್ಪಾದಕರಿಗೆ ರಾಜ್ಯಪಾಲ ಸತ್ಯಪಾಲ್ ಮಲೀಕ್ ಕರೆ ನೀಡಿದ್ದಾರೆ.

ಕಾರ್ಗಿಲ್: ಕಾಶ್ಮೀರವನ್ನು ಲೂಟಿ ಮಾಡಿದವರನ್ನು ಹತ್ಯೆ ಮಾಡಿ ಎಂದು ಭಯೋತ್ಪಾದಕರಿಗೆ ರಾಜ್ಯಪಾಲ ಸತ್ಯಪಾಲ್ ಮಲೀಕ್ ಕರೆ ನೀಡಿದ್ದಾರೆ. 
ಸತ್ಯಪಾಲ್ ಮಲೀಕ್ ಅವರ ಹೇಳಿಕೆ ವಿವಾದಕ್ಕೆ ದಾರಿ ಮಾಡಿಕೊಟ್ಟಿದೆ.  ರಾಜ್ಯದಲ್ಲಿ ಭ್ರಷ್ಟಾಚಾರ ಅತಿ ದೊಡ್ಡ ರೋಗವಾಗಿದೆ. ಯಾವುದೇ ಕಾರಣವಿಲ್ಲದೇ ಯುವಕರು ಭದ್ರತಾ ಸಿಬ್ಬಂದಿಗಳನ್ನು, ಮುಗ್ಧರನ್ನು ಹತ್ಯೆ ಮಾಡುತ್ತಿದ್ದಾರೆ. ಅವರನ್ನೇಕೆ ಹತ್ಯೆ ಮಾಡುತ್ತೀರಿ? ಅದರ ಬದಲು ರಾಜ್ಯವನ್ನು ಲೂಟಿ ಮಾಡಿದ ಜನರನ್ನು ಹತ್ಯೆ ಮಾಡಿ, ಈ ವರೆಗೆ ಯಾರಾದರೂ ಅಂತಹ ಒಬ್ಬ ವ್ಯಕ್ತಿಯನ್ನು ಕೊಂದಿದ್ದೀರಾ? ಎಂದು ಸತ್ಯಪಾಲ್ ಮಲೀಕ್ ಹೇಳಿದ್ದಾರೆ. 
ಬಂದೂಕು ಎಂದಿಗೂ ಸಮಸ್ಯೆಗಳಿಗೆ ಪರಿಹಾರವಾಗಲಾರದು, ಯಾರೂ ಸಹ ಅದನ್ನು ಬಳಸಿ ಸರ್ಕಾರವನ್ನು ಬಗ್ಗಿಸುವುದಕ್ಕೆ ಸಾಧ್ಯವಿಲ್ಲ, ನಿಮ್ಮದು ನಿರರ್ಥಕ ಹೋರಾಟ, ನಿಮ್ಮ ಜೀವಗಳನ್ನು ವ್ಯರ್ಥ ಮಾಡಿಕೊಳ್ಳುತ್ತಿದ್ದೀರಿ  ಎಂದೂ ರಾಜ್ಯಪಾಲರು ಉಗ್ರರ ಕುರಿತು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT