ಸುಪ್ರೀಂ ಕೋರ್ಟ್ 
ದೇಶ

ಅಸ್ಸಾಂ ಎನ್ಆರ್ ಸಿ: ಆಗಸ್ಟ್ 31ರ ವರೆಗೆ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ) ಅಂತಿಮ ವರದಿಯನ್ನು ತಯಾರಿಸಲು ನೀಡಲಾಗಿರುವ ಗಡುವನ್ನು ಸುಪ್ರೀಂ ಕೋರ್ಟ್ ಆಗಸ್ಟ್ 31ರ ವರೆಗೆ...

ನವದೆಹಲಿ: ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ) ಅಂತಿಮ ವರದಿಯನ್ನು ತಯಾರಿಸಲು ನೀಡಲಾಗಿರುವ ಗಡುವನ್ನು ಸುಪ್ರೀಂ ಕೋರ್ಟ್ ಆಗಸ್ಟ್ 31ರ ವರೆಗೆ ವಿಸ್ತರಣೆ ಮಾಡಿದೆ. ಆದರೆ ಶೇ.20ರಷ್ಟು ಸ್ಯಾಂಪಲ್ ಗಳ ಮರು ಪರಿಶೀಲನೆ ಕೋರಿ ಸಲ್ಲಿಸಿದ್ದ ಅರ್ಜಿಯವನ್ನು ವಜಾಗೊಳಿಸಿದೆ.
ಈ ಮುಂಚೆ ಜುಲೈ 31ರ ಗಡುವನ್ನು ವಿಸ್ತರಿಸಲು ನಿರಾಕರಿಸಿದ್ದ ಸುಪ್ರೀಂ ಕೋರ್ಟ್, ಇಂದು ಒಂದು ತಿಂಗಳು ಗಡುವು ವಿಸ್ತರಿಸಿ ಆದೇಶ ನೀಡಿದೆ.
ಭಾರತ ವಿಶ್ವದ ನಿರಾಶ್ರಿತರ ರಾಜಧಾನಿಯಾಗಲು ಸಾಧ್ಯವಿಲ್ಲ. ಹೀಗಾಗಿ ಅಸ್ಸಾಂ ಎನ್ಆರ್ ಸಿ ವರದಿ ಸಿದ್ಧಪಡಿಸಲು ಜುಲೈ 31ರ ಗುಡವು ವಿಸ್ತರಿಸಬೇಕು ಎಂದು ಕೇಂದ್ರ ಮತ್ತು ಅಸ್ಸಾಂ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದವು. ಅಲ್ಲದೆ ತಪ್ಪಾಗಿ ಎನ್ ಆರ್ ಸಿ ಪಟ್ಟಿಗೆ ಸೇರಿದ ಮತ್ತು ಸೇರದೆ ಇರುವುದನ್ನು ಪತ್ತೆ ಹಚ್ಚಲು ಶೇ.20ರಷ್ಟು ಸ್ಯಾಂಪಲ್ ಪರಿಶೀಲಿನೆಗೆ ಅವಕಾಶ ನೀಡಬೇಕು ಎಂದು ಎರಡೂ ಸರ್ಕಾರಗಳು ಮನವಿ ಮಾಡಿದ್ದವು. ಆದರೆ ಸ್ಯಾಂಪಲ್ ಪರಿಶೀಲನೆಗೆ ಕೋರ್ಟ್ ನಿರಾಕರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT