ಲೋಕಸಭೆ 
ದೇಶ

ಟ್ರಂಪ್ 'ಮಧ್ಯಸ್ಥಿಕೆ' ಹೇಳಿಕೆ: ಲೋಕಸಭೆಯಲ್ಲಿ ಕೆ ಸುರೇಶ್, ಡಿ ರಾಜಾರಿಂದ ನಿಲುವಳಿ ಸೂಚನೆ ಮಂಡನೆ

ಕಾಶ್ಮೀರ ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕೇಳಿಕೊಂಡಿದ್ದರು ...

ನವದೆಹಲಿ: ಕಾಶ್ಮೀರ ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕೇಳಿಕೊಂಡಿದ್ದರು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆ ತೀವ್ರ ಗದ್ದಲ, ಕೋಲಾಹಲಕ್ಕೆ ಕಾರಣವಾಗಿದ್ದು ಮಂಗಳವಾರ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ಕೆ ಸುರೇಶ್ ನಿಲುವಳಿ ಸೂಚನೆ ಮಂಡಿಸಿದರು.
ಕಾಶ್ಮೀರ ವಿವಾದ ಕುರಿತು ದೇಶ ತನ್ನದೇ ಆದ ನಿಲುವು ಹೊಂದಿದೆ, ಈ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲು ಮೂರನೇ ವ್ಯಕ್ತಿಗೆ ಯಾವತ್ತೂ ಬಿಡುವುದಿಲ್ಲ ಎಂದು ಸುರೇಶ್ ಹೇಳಿದರು.
ಸಂಸದರನ್ನು ಮತ್ತು ದೇಶದ ಜನರ ವಿಶ್ವಾಸಕ್ಕೆ ತೆಗೆದುಕೊಳ್ಳದೆ ನರೇಂದ್ರ ಮೋದಿಯವರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡು ಮಧ್ಯಸ್ಥಿಕೆ ವಹಿಸುವಂತೆ ಟ್ರಂಪ್ ಅವರನ್ನು ಕೇಳಲು ಹೇಗೆ ಸಾಧ್ಯ, ಇದೊಂದು ಗಂಭೀರ ವಿಷಯ ಎಂದರು.
ನರೇಂದ್ರ ಮೋದಿಯವರು ಸದನಕ್ಕೆ ಬಂದು ಟ್ರಂಪ್ ಅವರು ನಿನ್ನೆ ನೀಡಿದ ಹೇಳಿಕೆ ಸತ್ಯವೋ, ಸುಳ್ಳು ಎಂದು ಸ್ಪಷ್ಟನೆ ಕೊಡಬೇಕು. ಟ್ರಂಪ್ ಅವರ ಹೇಳಿಕೆಯನ್ನು ಕಣ್ಣುಮುಚ್ಚಿ ಹೇಗೆ ವಿದೇಶಾಂಗ ವ್ಯವಹಾರಗಳ ಸಚಿವರು ನಿರಾಕರಿಸುತ್ತಾರೆ, ಅವರ ಹೇಳಿಕೆ ಪ್ರಮುಖವಾಗಿರುತ್ತದೆ ಎಂದು ಕೂಡ ಸುರೇಶ್ ಪ್ರಶ್ನಿಸಿದರು.
ಇದೇ ಸಂದರ್ಭದಲ್ಲಿ ಸಿಪಿಐ ಸಂಸದ ಡಿ ರಾಜಾ, ಇದೇ ವಿವಾದಕ್ಕೆ ಸಂಬಂಧಿಸಿದಂತೆ ಸದನದ ಕಲಾಪವನ್ನು ಅಮಾನತುಗೊಳಿಸುವಂತೆ ನೊಟೀಸ್ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ