ಕೆ ಚಂದ್ರಶೇಖರ್ ರಾವ್ 
ದೇಶ

ತೆಲಂಗಾಣ: ಹುಟ್ಟೂರಿನ 2 ಸಾವಿರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಘೋಷಿಸಿದ ಕೆಸಿಆರ್

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ತಮ್ಮ ಹುಟ್ಟೂರಾದ ಚಿಂತಾಮಡಕ ಗ್ರಾಮದಲ್ಲಿ ವಾಸಿಸುತ್ತಿರುವ 2 ಸಾವಿರ ಕುಟುಂಬಕ್ಕೆ...

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ತಮ್ಮ ಹುಟ್ಟೂರಾದ ಚಿಂತಾಮಡಕ ಗ್ರಾಮದಲ್ಲಿ ವಾಸಿಸುತ್ತಿರುವ 2 ಸಾವಿರ ಕುಟುಂಬಕ್ಕೆ ಸರ್ಕಾರದ ವತಿಯಿಂದ ತಲಾ 10 ಲಕ್ಷ ರೂಪಾಯಿ ಬ್ಯಾಂಕ್ ಖಾತೆಗೆ ಹಾಕುವುದಾಗಿ ಘೋಷಿಸಿದ್ದಾರೆ.
ಸಿದ್ದಿಪೇಟ್ ಜಿಲ್ಲೆಯ ಚಿಂತಾಮಡಕದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಸಿಆರ್, ಈ ಗ್ರಾಮದಲ್ಲಿ ಜನ್ಮ ಪಡೆದಿರುವ ನಾನು, ಈ ಗ್ರಾಮದಲ್ಲಿ ವಾಸವಿರುವ 2 ಸಾವಿರ ಕುಟುಂಬಸ್ಥರ ಖಾತೆಗೆ ಸರ್ಕಾರದ ವತಿಯಿಂದ ತಲಾ 10 ಲಕ್ಷ ರೂಪಾಯಿ ನೀಡಲು ಉದ್ದೇಶಿಸಿದ್ದೇನೆ. ಈ ಹಣವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಸರ್ಕಾರ ನೀಡುವ 10 ಲಕ್ಷ ರೂಪಾಯಿ ಹಣದಲ್ಲಿ ಟ್ರಾಕ್ಟರ್, ಹೊಲ ಸೇರಿದಂತೆ ನೀವು ಏನು ಬೇಕಾದರೂ ಖರೀದಿಸಿ ಎಂದು ಸಿಎಂ ಹೇಳಿದರು.
ಕೆ.ಚಂದ್ರಶೇಖರ್ ರಾವ್ ಅವರ ಈ ನಿರ್ಧಾರದಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 200 ಕೋಟಿಯಷ್ಟು ಹೊರೆಯಾಗಲಿದೆ ಎಂದು ಅಂದಾಜಿಸಲಾಗಿದ್ದು, ಇದಕ್ಕೆ ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಕೇವಲ ಮುಖ್ಯಮಂತ್ರಿ ಸ್ವಗ್ರಾಮದ ಜನರಿಗೆ ಅನುಕೂಲ ಮಾಡಿಕೊಟ್ಟರೆ ಸಾಕೇ?, ಈ ಯೋಜನೆ ಪ್ರಾಂತ್ಯದ ಎಲ್ಲ ಜನರಿಗೆ ಸಿಗುವಂತಾಗಬೇಕು. ರಾಜ್ಯದ ಎಲ್ಲ ಜನರಿಗೂ ಅನುಕೂಲವಾಗುವಂತೆ ಯೋಜನೆಗಳನ್ನು ಘೋಷಿಸಬೇಕು ಎಂದು ಬಿಜೆಪಿ ಮುಖಂಡ ಪಿ ಮುರಳೀಧರ್ ರಾವ್ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT