ಕಮಲ್ ನಾಥ್ 
ದೇಶ

ಮಧ್ಯ ಪ್ರದೇಶ: ಕಾಂಗ್ರೆಸ್ ಸರ್ಕಾರದ ಪರ ಮತ ಚಲಾಯಿಸಿದ ಇಬ್ಬರು ಬಿಜೆಪಿ ಶಾಸಕರು

ವರಿಷ್ಠರು ಸೂಚನೆ ನೀಡಿದರೆ ಕೇವಲ 24 ಗಂಟೆಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಧ್ಯ ಪ್ರದೇಶ ವಿಧಾನಸಭೆಯ ಪ್ರತಿಪಕ್ಷದ ನಾಯಕ ಹೇಳಿಕೆ...

ಭೋಪಾಲ್: ವರಿಷ್ಠರು ಸೂಚನೆ ನೀಡಿದರೆ ಕೇವಲ 24 ಗಂಟೆಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಧ್ಯ ಪ್ರದೇಶ ವಿಧಾನಸಭೆಯ ಪ್ರತಿಪಕ್ಷದ ನಾಯಕ ಹೇಳಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಇಬ್ಬರು ಬಿಜೆಪಿ ಶಾಸಕರು ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪರ ಮತ ಚಲಾಯಿಸುವ ಮೂಲಕ ಕೇಸರಿ ಪಡೆಗೆ ಶಾಕ್ ನೀಡಿದ್ದಾರೆ.
ಆಪರೇಷನ್ ಕಮಲದ ಪರಿಣಾಮ ಕರ್ನಾಟಕದಲ್ಲಿ ಕಾಂಗ್ರೆಸ್​ ಮತ್ತು ಜೆಡಿಎಸ್​ ಮೈತ್ರಿ ಸರ್ಕಾರ ಪತನವಾದ ಬೆನ್ನಲ್ಲೇ ಮಧ್ಯಪ್ರದೇಶದ ಪ್ರತಿಪಕ್ಷ ನಾಯಕ ಗೋಪಾಲ್​ ಭಾರ್ಗವ ಅವರು, ಕಮಲ್​ನಾಥ್​ ನೇತೃತ್ವದ ಸರ್ಕಾರ 7 ತಿಂಗಳಿಂದ ಆಡಳಿತದಲ್ಲಿದೆ. ಅವರು ಆಡಳಿತ ನಡೆಸಿದ್ದು ಇನ್ನು ಸಾಕು. ಪಕ್ಷದ ನಂ. 1 ಅಥವಾ ನಂ. 2 ಅವರಿಂದ ಆದೇಶ ಬಂದರೆ 24 ಗಂಟೆಯೊಳಗೆ ನಿಮ್ಮ ಸರ್ಕಾರ ಉಳಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.
ಪ್ರತಿಪಕ್ಷ ನಾಯಕ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಮಧ್ಯ ಪ್ರದೇಶ ಸರ್ಕಾರ ಅಪರಾಧ ಕಾನೂನು ತಿದ್ದುಪಡಿ ಮಸೂದೆಯನ್ನು ವಿಧಾನಸಭೆಯಲ್ಲಿ ಮತಕ್ಕೆ ಹಾಕಿತು. ಈ ವೇಳೆ ಬಿಜೆಪಿಯ ಇಬ್ಬರು ಶಾಸಕರು ನಮ್ಮ ಸರ್ಕಾರದ ಪರ ಮತ ಹಾಕಿದ್ದಾರೆ ಎಂದು ಕಮಲ್ ನಾಥ್ ಅವರು ತಿಳಿಸಿದ್ದಾರೆ.
ಇದೇ ವೇಳೆ ಬಿಜೆಪಿ ನಾಯಕ ಗೋಪಾಲ್​ ಭಾರ್ಗವ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಕಮಲ್ ನಾಥ್ ಅವರು, ಬಿಜೆಪಿ ಕನಸು ನನಸಾಗುವುದಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್​ ಶಾಸಕರು ಮಾರಾಟಕ್ಕೆ ಇಲ್ಲ. ಬಿಜೆಪಿ ಬಯಸಿದಾಗ ನಾವು ವಿಶ್ವಾಸಮತ ಸಾಬೀತು ಪಡಿಸಲು ಸಿದ್ಧರಿದ್ದೇವೆ ಎಂದರು.
ಮಧ್ಯಪ್ರದೇಶದಲ್ಲಿ 231 ಸಂಖ್ಯಾಬಲವಿದ್ದು, ಬಿಎಸ್​ಪಿ ಮತ್ತು ಪಕ್ಷೇತರ ಶಾಸಕರ ಬೆಂಬಲದೊಂದಿಗೆ 121 ಸದಸ್ಯ ಬಲದೊಂದಿಗೆ ಕಾಂಗ್ರೆಸ್​ ನೇತೃತ್ವದ ಮೈತ್ರಿ ಸರ್ಕಾರ ಆಡಳಿತ ನಡೆಸುತ್ತಿದೆ. ಕಾಂಗ್ರೆಸ್​ ಪಕ್ಷ 114 ಶಾಸಕರನ್ನು ಹೊಂದಿದ್ದರೆ, ಬಿಜೆಪಿ 108 ಶಾಸಕರನ್ನು ಹೊಂದಿದೆ. ಸರಳ ಬಹುಮತಕ್ಕೆ 116 ಶಾಸಕರ ಅಗತ್ಯವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಹಾರದಲ್ಲಿ NI-MO ಮೋಡಿ: NDA ಪ್ರಚಂಡ ಗೆಲುವು; ಅತಿದೊಡ್ಡ ಪಕ್ಷವಾಗಿ BJP; ಕುಸಿದ ತೇಜಸ್ವಿ ಯಾದವ್; Congress ಸ್ಥಿತಿ ಹೀನಾಯ!

2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲೂ ಬಿಹಾರ ರೀತಿ ಫಲಿತಾಂಶ ಮರುಕಳಿಸಲಿದೆ: ಎಚ್‌ಡಿ ಕುಮಾರಸ್ವಾಮಿ ಭವಿಷ್ಯ

ಕಬ್ಬು ಬೆಳೆಗೆ ಬೆಂಕಿ: 'ಪೂರ್ವ ಯೋಜಿತ ಕೃತ್ಯ'.. ದುಷ್ಕರ್ಮಿಗಳಿಗಾಗಿ ಪೊಲೀಸರ ತೀವ್ರ ಶೋಧ

ಬಿಹಾರ ಚುನಾವಣೆ 2025: ಸೋತು ಗೆದ್ದ ತೇಜಸ್ವಿ ಯಾದವ್; ಕುಟುಂಬದ ಭದ್ರಕೋಟೆ ರಾಘೋಪುರ್ ಉಳಿಸಿಕೊಳ್ಳಲು ಸುಸ್ತೋ ಸುಸ್ತು!

Bihar Elections 2025: NDA ಗೆಲುವಿನ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೆ Modi ಬಗ್ಗೆ Nitish ಅಚ್ಚರಿಯ ಹೇಳಿಕೆ!

SCROLL FOR NEXT