ಮೆಹಬೂಬಾ ಮುಫ್ತಿ 
ದೇಶ

ಮೈತ್ರಿ ಸರ್ಕಾರ ಪತನ: ಪ್ರಜಾಪ್ರಭುತ್ವದ ಕರಾಳ ದಿನ ಎಂದ ಮೆಹಬೂಬಾ ಮುಫ್ತಿ

ಕರ್ನಾಟಕ ರಾಜ್ಯದ ವಿಧಾನಸಭೆಯಲ್ಲಿ ಮಂಗಳವಾರ ನಡೆದ ವಿಶ್ವಾಸಮತ ಯಾಚನೆಯಲ್ಲಿ ಕಾಂಗ್ರೆಸ್ –ಜೆಡಿಎಸ್ ಮೈತ್ರಿ....

ಶ್ರೀನಗರ: ಕರ್ನಾಟಕ ರಾಜ್ಯದ ವಿಧಾನಸಭೆಯಲ್ಲಿ ಮಂಗಳವಾರ ನಡೆದ ವಿಶ್ವಾಸಮತ ಯಾಚನೆಯಲ್ಲಿ ಕಾಂಗ್ರೆಸ್ –ಜೆಡಿಎಸ್ ಮೈತ್ರಿ ಪತನಗೊಂಡಿರುವ ಕುರಿತು ಪ್ರತಿಕ್ರಿಯಿಸಿರುವ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ, ಇದು ಪ್ರಜಾಪ್ರಭುತ್ವದ ಕರಾಳ ದಿನ ಎಂದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ಸಂಭ್ರಮಿಸುತ್ತಿದ್ದ ದೇಶದ ಜನರು, ಇಂದು ಚುನಾಯಿತ ಸರ್ಕಾರ ಪತನಗೊಳ್ಳುವುದನ್ನು ನೋಡಿದ್ದಾರೆ ಎಂದಿದ್ದಾರೆ.
‘ಕರ್ನಾಟಕದ ಶಾಸಕರನ್ನು ಮುಂಬೈಗೆ ಕರೆದೊಯ್ದು ಐಷಾರಾಮಿ ವಸತಿ ಸೌಕರ್ಯ ಕಲ್ಪಿಸಲು ಎಲ್ಲಾ ಹಣ ವ್ಯಯಿಸಲಾಗಿದೆ. ಇದು ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದು, ಪ್ರಜಾಪ್ರಭುತ್ವದ ಕರಾಳ ದಿನ’ ಎಂದಿದ್ದಾರೆ.
ಆದರೆ, ರಾಜ್ಯದ ಇನ್ನೋರ್ವ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಓಮರ್ ಅಬ್ದುಲ್ಲ, ‘ಇದನ್ನು ಪ್ರಜಾಪ್ರಭುತ್ವದ ಕಗ್ಗೊಲೆ ಎನ್ನಲಾಗದು. ಇದು ಕೂಡ ಚದುರಿದ ಫಲಿತಾಂಶದ ಹೊರಹೊಮ್ಮಿದ ಅವಕಾಶವಾದಿ ಮೈತ್ರಿಕೂಟವಾಗಿತ್ತು. ಇದು ರೆಸಾರ್ಟ್, ಹೋಟೆಲ್ ವಾಸ್ತವ್ಯ ಹಾಗೂ ಖಾಸಗಿ ವಿಮಾನ ಹಾರಾಟದ ಮೂಲಕ ಹುಟ್ಟಿದ ಇನ್ನೊಂದು ಅವಕಾಶವಾದಿ ಸರ್ಕಾರಕ್ಕೆ ದಾರಿ ಮಾಡಿಕೊಡಲಿದೆ ’ ಎಂದಿದ್ದಾರೆ.
ಮಂಗಳವಾರ ಕರ್ನಾಟಕ ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಯಾಚನೆಯಲ್ಲಿ ಮೈತ್ರಿ ಸರ್ಕಾರ 6 ಮತಗಳಿಂದ ಸೋಲು ಅನುಭವಿಸಿತ್ತು. ಇದರಿಂದ 14 ತಿಂಗಳ ಮೈತ್ರಿ ಸರ್ಕಾರ ಪತನಗೊಂಡಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT