ರೈಲಿನಲ್ಲೂ ಇನ್ನು ಮುಂದೆ ಬಯೋಮೆಟ್ರಿಕ್ ವ್ಯವಸ್ಥೆ: ಪ್ರಯಾಣಿಕರಿಗೆ ಇದರಿಂದ ಏನು ಪ್ರಯೋಜನ? ಇಲ್ಲಿದೆ ಮಾಹಿತಿ 
ದೇಶ

ರೈಲಿನಲ್ಲೂ ಇನ್ನು ಮುಂದೆ ಬಯೋಮೆಟ್ರಿಕ್ ವ್ಯವಸ್ಥೆ: ಪ್ರಯಾಣಿಕರಿಗೆ ಇದರಿಂದ ಏನು ಪ್ರಯೋಜನ? ಇಲ್ಲಿದೆ ಮಾಹಿತಿ

ರೈಲಿನ ಸಾಮಾನ್ಯ ವಿಭಾಗದಲ್ಲೂ ಇನ್ನು ಮುಂದೆ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಯಾಗಲಿದ್ದು, ದೀರ್ಘಾವಧಿ ರೈಲು ಪ್ರಯಾಣ ಮಾಡುವವರಿಗೆ ಇದು ಉಪಯೋಗವಾಗಲಿದೆ.

ನವದೆಹಲಿ: ರೈಲಿನ ಸಾಮಾನ್ಯ ವಿಭಾಗದಲ್ಲೂ ಇನ್ನು ಮುಂದೆ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಯಾಗಲಿದ್ದು, ದೀರ್ಘಾವಧಿ ರೈಲು ಪ್ರಯಾಣ ಮಾಡುವವರಿಗೆ ಇದು ಉಪಯೋಗವಾಗಲಿದೆ. 
ರೈಲ್ವೆ ಇಲಾಖೆ ದೂರ ಪ್ರಯಾಣ ಮಾಡುವ ರೈಲುಗಳಿಗೆ ಈ ರೀತಿಯ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಪರೀಕ್ಷೆ ಮಾಡಲಾಗಿದೆ. ಸಾಮಾನ್ಯ ಬೋಗಿಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ತರುವುದರಿಂದ ಮೊದಲು ಬಂದವರಿಗೆ ಮೊದಲು ಆಸನ ಸಿಗಲಿದೆ. 
ಸಾಮಾನ್ಯ ಬೋಗಿಗಳಲ್ಲಿ ಸಂಚರಿಸುವಾಗ ನೂಕು-ನುಗ್ಗಲು ಉಂಟಾಗುವುದು ಸಾಮಾನ್ಯವಾಗಿ ಕಂಡುಬರುವ ದೃಶ್ಯ. ಒಮ್ಮೆ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೊಳಿಸಿದರೆ ಇಂತಹ ಸ್ಥಿತಿಯನ್ನು ಸುಧಕರಣೆ ಮಾಡಬಹುದೆಂಬುದು ರೈಲ್ವೆ ಇಲಾಖೆಯ ಉದ್ದೇಶವಾಗಿದೆ. 
ಮುಂಬೈ ನ ಛತ್ರಪತಿ ಶಿವಾಜಿ ಟರ್ಮಿನಸ್ ನಿಂದ ಲಖನೌ ಕೇಂದ್ರದ ವರೆಗೆ ಸಂಚರಿಸುವ ಪುಷ್ಪಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಾಯೋಗಿಕವಾಗಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಪರೀಕ್ಷಿಸಲಾಗಿದೆ. 
ಯಾವುದೇ ವ್ಯಕ್ತಿ ರೈಲ್ವೆ ನಿಲ್ದಾಣದಲ್ಲಿ ಆಗಮಿಸುತ್ತಿದ್ದಂತೆಯೇ ಬಯೋಮೆಟ್ರಿಕ್ ಯಂತ್ರದ ಮೂಲಕ ತಾವು ತೆರಳುತ್ತಿರುವ ರೈಲಿಗೆ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ. ಒಮ್ಮೆ ನೋಂದಣಿ ಮಾಡಿಕೊಂಡರೆ ರೈಲಿನ ಸಾಮಾನ್ಯ ಬೋಗಿಯಲ್ಲಿ ಆ ವ್ಯಕ್ತಿಗೆ ಆಸನ ವ್ಯವಸ್ಥೆಯನ್ನು ಕಾಯ್ದಿರಿಸಲಾಗುತ್ತದೆ. ಈ ರೀತಿ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಯಾಗುವುದರಿಂದ ಸಾಮಾನ್ಯ ಬೋಗಿಗಳಲ್ಲಿ ಅತಿ ಹೆಚ್ಚಿನ ಜನಸಂದಣಿಯನ್ನೂ ತಡೆಗಟ್ಟಬಹುದಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT