ರಮಾದೇವಿ - ಅಜಂ ಖಾನ್ 
ದೇಶ

ನಿಮ್ಮ ಕಣ್ಣಲ್ಲಿ ಕಣ್ಣಿಟ್ಟು ಮಾತನಾಡಬೇಕು ಅನಿಸುತ್ತಿದೆ: ಸದನದಲ್ಲಿ ಅಜಂ ಖಾನ್ ವಿವಾದಾತ್ಮಕ ಹೇಳಿಕೆ

ವಿವಾದಾತ್ಮಕ ರಾಜಕಾರಣಿ, ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ಅವರು ಗುರುವಾರ ಲೋಕಸಭೆಯಲ್ಲಿ ಡೆಪ್ಯೂಟಿ ಸ್ಪೀಕರ್ ರಮಾದೇವಿ ಅವರ...

ನವದೆಹಲಿ: ವಿವಾದಾತ್ಮಕ ರಾಜಕಾರಣಿ, ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ಅವರು ಗುರುವಾರ ಲೋಕಸಭೆಯಲ್ಲಿ ಡೆಪ್ಯೂಟಿ ಸ್ಪೀಕರ್ ರಮಾದೇವಿ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ಪೇಚಿಗೆ ಸಿಲುಕಿಕೊಂಡಿದ್ದಾರೆ.
ಇಂದು ಲೋಕಸಭೆಯಲ್ಲಿ ತ್ರಿವಳಿ ತಲಾಖ್ ಕುರಿತು ಗಂಭೀರ ಚರ್ಚೆ ನಡೆಯುತ್ತಿರುವ ಸಮಯದಲ್ಲಿ ಇತರ ಸದಸ್ಯರ ಗದ್ದಲಕ್ಕೆ ಗಮನಕೊಡದೇ ತಮ್ಮನ್ನು ಉದ್ದೇಶಿಸಿ ಮಾತನಾಡುವಂತೆ ಸ್ಪೀಕರ್ ಅನುಪಸ್ಥಿತಿಯಲ್ಲಿ ಕಲಾಪ ನಡೆಸುತ್ತಿದ್ದ ಬಿಜೆಪಿ ಸಂಸದೆ ರಮಾದೇವಿ ಅವರು ಅಜಂ ಖಾನ್ ಅವರಿಗೆ ಸೂಚಿಸಿದ್ದಾರೆ.
ಈ ವೇಳೆ ರಮಾದೇವಿಯವರನ್ನು ಉದ್ದೇಶಿಸಿ ಮಾತನಾಡಿದ ಅಜಂ ಖಾನ್, ‘ಆಪ್ ಕೀ ಆಂಖೋ ಮೇ ಆಂಖೇ ಡಾಲ್ ಕೇ ಬಾತ್ ಕರ್ ನೇ ಕಾ ಮನ್ ಕರ್ ತಾ ಹೈ’ (ನಿಮ್ಮ ಕಣ್ಣಲ್ಲಿ ಕಣ್ಣನಿಟ್ಟು ಮಾತನಾಡುವ ಬಯಕೆ ಉಂಟಾಗುತ್ತಿದೆ) ಎಂದು ಹೆಳಿದರು.
ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿದ ಸಭಾಧ್ಯಕ್ಷರ ಪೀಠದಲ್ಲಿದ್ದ ರಮಾದೇವಿ ಅವರು ‘ಇದು ಮಾತನಾಡುವ ರೀತಿ ಅಲ್ಲ, ಮತ್ತು ಈ ಮಾತುಗಳನ್ನು ಕಡತದಿಂದ ತೆಗೆದು ಹಾಕಿ’ ಎಂದು ಸೂಚನೆ ಕೊಟ್ಟರು. ತಕ್ಷಣ ತನ್ನ ತಪ್ಪನ್ನು ಅರ್ಥ ಮಾಡಿಕೊಂಡ ಸಂಸದ ಅಜಂ ಖಾನ್ ‘ನಿಮ್ಮ ಬಗ್ಗೆ ಅಪಾರವಾದ ಗೌರವ ಇದೆ ; ನೀವು ನನ್ನ ಸಹೋದರಿ ಇದ್ದ ಹಾಗೆ’ ಎಂದು ಹೇಳಿ ಪ್ರಕರಣಕ್ಕೆ ತೆರ ಎಳೆಯಲು ಪ್ರಯತ್ನಿಸಿದರು.
ಆದರೆ ಅಜಂ ಖಾನ್ ಅವರ ಈ ಹೇಳಿಕೆ ಬಿಜೆಪಿ ಸಂಸದರನ್ನು ಕೆರಳಿಸಿತು ಮತ್ತು ಸಂಸತ್ ಗದ್ದಲದ ಗೂಡಾಯಿತು. ಆದರೆ ಅಜಂ ಖಾನ್ ಅವರು ಮಾತನಾಡಿ ನಾನು ಯಾವುದೇ ರೀತಿಯಲ್ಲಿ ಅಸಾಂವಿಧಾನಕ ಪದ ಬಳಕೆ ಮಾಡಿಲ್ಲ ಹಾಗೇನಾದರೂ ಮಾಡಿದ್ದಲ್ಲಿ ನನ್ನ ಸಂಸದ ಸ್ಥಾನಕ್ಕೆ ಈಗಲೇ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದರು. ಅಜಂ ಖಾನ್ ಅವರನ್ನು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರೂ ಸಹ ಸಮರ್ಥಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

77ನೇ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಕರ್ತವ್ಯ ಪಥದಲ್ಲಿ ಪರೇಡ್ ಆರಂಭ

77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ಪ್ರಧಾನಿ ಮೋದಿ ನಮನ

77ನೇ ಗಣರಾಜ್ಯೋತ್ಸವ ಸಂಭ್ರಮ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣ ಯಥಾವತ್ ಓದಿದ ರಾಜ್ಯಪಾಲ ಗೆಹ್ಲೋಟ್..!

ರಾಜ್ಯದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಧ್ವಜಾರೋಹಣ, ಪರೇಡ್ ಆರಂಭ

ದೇಶದಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ದೆಹಲಿಯಲ್ಲಿ ಹೆಚ್ಚಿದ ಭದ್ರತೆ

SCROLL FOR NEXT