ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ 
ದೇಶ

ಅಂತಾರಾಜ್ಯ ಗಡಿಗಳಲ್ಲಿ ಜಂಟಿ ಕಾರ್ಯಾಚರಣೆಯಿಂದ ಮಾದಕ ವಸ್ತು ಸಾಗಣೆ ತಡೆ ಸಾಧ್ಯ- ಪಂಜಾಬ್ ಮುಖ್ಯಮಂತ್ರಿ

ಅಂತಾರಾಜ್ಯ ಗಡಿಗಳಲ್ಲಿ ಜಂಟಿ ಕಾರ್ಯಾಚರಣೆಯಿಂದ ಮಾದಕ ವಸ್ತು ಸಾಗಣೆಯನ್ನು ತಡೆಗಟ್ಟಬಹುದು ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

ಚಂಡೀಗಢ:  ಅಂತಾರಾಜ್ಯ ಗಡಿಗಳಲ್ಲಿ ಜಂಟಿ ಕಾರ್ಯಾಚರಣೆಯಿಂದ ಮಾದಕ ವಸ್ತು ಸಾಗಣೆಯನ್ನು ತಡೆಗಟ್ಟಬಹುದು ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.
ಮಾದಕ ವಸ್ತು ನಿಯಂತ್ರಣ ಮತ್ತು ಸವಾಲುಗಳು ಕುರಿತು ಎರಡನೇ ಪ್ರಾದೇಶಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮಾದಕ ವಸ್ತು ನಿಯಂತ್ರಣಕ್ಕಾಗಿ ಕ್ರಿಯಾ ಯೋಜನೆ ಹಾಗೂ ಸಮಗ್ರ ಕಾರ್ಯತಂತ್ರ ಕುರಿತು ವಿವರಿಸಿದರು.
ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್, ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಸೇರಿದಂತೆ  ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಹಿರಿಯ ಅಧಿಕಾರಿಗಳು ಈ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು. 
ಭಾರತದಲ್ಲಿ ತೊಂದರೆ ಉಂಟುಮಾಡುವ ನಿಟ್ಟಿನಲ್ಲಿ  ಉರಿ, ಕಾಂದ್ಲಾ ಮತ್ತಿತರ ಕಡೆಗಳಿಂದ ಮಾದಕವಸ್ತುವನ್ನು ಸಾಗಿಸುತ್ತಿರುವ ಪಾಕಿಸ್ತಾನ ಭಯೋತ್ಪಾದನೆಯನ್ನು ಪ್ರಚೋದಿಸುತ್ತಿದೆ. ಯಾವುದೇ ರಾಜ್ಯ ಏಕಾಂಗಿಯಾಗಿ ಮಾದಕ ವಸ್ತು ಸಾಗಣೆಯನ್ನು ತಡಗೆಟ್ಟಲು ಸಾಧ್ಯವಿಲ್ಲ, ಎಲ್ಲ ರಾಜ್ಯಗಳು ಒಗ್ಗೂಡಿ ಇದರ ಸಾಗಣೆಯನ್ನು ನಿಯಂತ್ರಿಸಬಹುದು ಎಂದು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT