ಪಿಎಂ ನರೇಂದ್ರ ಮೋದಿ 
ದೇಶ

ಕಾರ್ಗಿಲ್ ಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಹನ ನಡೆಸಿದ್ದು ಅವಿಸ್ಮರಣೀಯ: ಪಿಎಂ ಮೋದಿ

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಪಾಕಿಸ್ತಾನ ವಿರುದ್ಧ 1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಪಾಕಿಸ್ತಾನ ವಿರುದ್ಧ 1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಿದರು. ಕಾರ್ಗಿಲ್ ಯುದ್ಧ ನಡೆದು ಇಂದಿಗೆ 20 ವರ್ಷ.
ಕಾರ್ಗಿಲ್ ವಿಜಯ ದಿವಸದ ಈ ಸಂದರ್ಭದಲ್ಲಿ ಭಾರತ ಮಾತೆಯ ಪುತ್ರರಿಗೆ ನನ್ನ ನಮನಗಳು. ಈ ದಿನ ನಮ್ಮ ಸೈನಿಕರ ತ್ಯಾಗ, ಬಲಿದಾನ, ಧೈರ್ಯಗಳನ್ನು ಸ್ಮರಿಸುವ ದಿನ ಎಂದು ಟ್ವೀಟ್ ಮಾಡಿದ್ದಾರೆ. ಭಾರತ ಮಾತೆಯನ್ನು ರಕ್ಷಿಸಲು ತಮ್ಮ ಜೀವ ಬಲಿದಾನ ಮಾಡಿದ ಶೌರ್ಯ ಯೋಧರಿಗೆ ನಮನಗಳು ಎಂದಿದ್ದಾರೆ.
1999ರಲ್ಲಿ ಪಾಕಿಸ್ತಾನ ವಿರುದ್ಧ ಕಾರ್ಗಿಲ್ ನಲ್ಲಿ ಭಾರತ ಯುದ್ಧದಲ್ಲಿ ಜಯ ಗಳಿಸಿದ ದಿನವನ್ನು ಕಾರ್ಗಿಲ್ ವಿಜಯ ದಿವಸ ಎಂದು ಆಚರಿಸಲಾಗುತ್ತದೆ. 
ಇದೇ ಸಂದರ್ಭದಲ್ಲಿ ಮೋದಿಯವರು 1999ರಲ್ಲಿ ಯುದ್ಧದ ಸಂದರ್ಭದಲ್ಲಿ ಕಾರ್ಗಿಲ್ ಗೆ ಭೇಟಿ ನೀಡಿ ಸೈನಿಕರೊಂದಿಗೆ ನಡೆಸಿದ ಮಾತುಕತೆಯ ಫೋಟೋಗಳನ್ನು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 
1999ರಲ್ಲಿ ನಾನು ಜಮ್ಮು-ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದೆ. ಆ ಸಂದರ್ಭದಲ್ಲಿ ಕಾರ್ಗಿಲ್ ಯುದ್ಧದ ಸಮಯದಲ್ಲಿ ಅಲ್ಲಿಗೆ ಹೋಗಿ ಸೈನಿಕರೊಂದಿಗೆ ನಡೆಸಿದ ಸಂವಾದ ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ಬರೆದುಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament special session: ಅಗ್ನಿ ಪರೀಕ್ಷೆಯಲ್ಲಿ ಮೋದಿ ಸರ್ಕಾರ, ಇಂದು ಪಾಸ್ ಆಗುತ್ತಾ ಪ್ರಮುಖ ಮಸೂದೆಗಳು?

'ಇರಾನ್ ತನ್ನ ಸಮೃದ್ಧ ಯುರೇನಿಯಂ ಸಂಗ್ರಹವನ್ನು ಹಸ್ತಾಂತರಿಸಲು ಒಪ್ಪಿಕೊಂಡಿದೆ, ಶಾಂತಿ ಒಪ್ಪಂದ ಹತ್ತಿರದಲ್ಲಿದೆ': Donald Trump

'ನನ್ನ ಸ್ನೇಹಿತ ಮೋದಿ ಜೊತೆಗೆ ಉತ್ತಮ ಮಾತುಕತೆ ನಡೆಸಿದೆ': ಡೊನಾಲ್ಡ್ ಟ್ರಂಪ್-Video

Bengaluru: ಎಲೆಕ್ಟ್ರಾನಿಕ್ ಸಿಟಿಯಲ್ಲಿ 'ಕೃತಕ ಬುದ್ಧಿಮತ್ತೆಯ ಉತ್ಕೃಷ್ಟತಾ ಕೇಂದ್ರ ಸ್ಥಾಪನೆಗೆ ಸಚಿವ ಸಂಪುಟ ಒಪ್ಪಿಗೆ- ಪ್ರಿಯಾಂಕ್ ಖರ್ಗೆ

ರಾಜ್ಯದಲ್ಲಿ ಬರಗಾಲದ ಕರಿನೆರಳು; ಆದರೆ ಸಿಎಂ- ಡಿಸಿಎಂಗೆ ಕುರ್ಚಿ ಕಿತ್ತಾಟದ ತೆವಲು! ಆರ್.ಅಶೋಕ್ ಕಿಡಿ

SCROLL FOR NEXT