ರಮಾದೇವಿ - ಅಜಂ ಖಾನ್ 
ದೇಶ

ಆಕ್ಷೇಪಾರ್ಹ ಹೇಳಿಕೆ: ಅಜಂ ಖಾನ್ ನಂತಹ ವ್ಯಕ್ತಿಗಳನ್ನು ಎದುರಿಸುವ ಶಕ್ತಿ ಇದೆ - ರಮಾದೇವಿ

ಸದನದಲ್ಲಿ ತಮ್ಮ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ನಂತಹ ವ್ಯಕ್ತಿಗಳನ್ನು ಎದುರಿಸುವ ಶಕ್ತಿ ನನಗೆ ಇದೆ ಎಂದು...

ನವದೆಹಲಿ: ಸದನದಲ್ಲಿ ತಮ್ಮ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ನಂತಹ ವ್ಯಕ್ತಿಗಳನ್ನು ಎದುರಿಸುವ ಶಕ್ತಿ ನನಗೆ ಇದೆ ಎಂದು ಬಿಹಾರ ಬಿಜೆಪಿ ಸಂಸದೆ ರಮಾದೇವಿ ಅವರು ಶನಿವಾರ ಹೇಳಿದ್ದಾರೆ.
ನಾನು ಕುಳಿತ ಸ್ಥಾನ ಕೇವಲು ನನಗೆ ಮಾತ್ರ ಸೇರಿದ್ದಲ್ಲ. ಅದು ಎಲ್ಲರಿಗೂ ಸೇರಿದ್ದು. ಹೀಗಾಗಿ ಅವರು ನೀಡಿದ ಹೇಳಿಕೆ ದೇಶದ ಎಲ್ಲಾ ಮಹಿಳೆಯರಿಗೂ ಅಗೌರವ ತೋರಿದಂತೆ. ಅಜಂ ಖಾನ್ ನಂತಹ ವ್ಯಕ್ತಿಗಳನ್ನು ಎದುರಿಸುವ ಶಕ್ತಿ ನನಗೆ ಇದೆ ಎಂದು ರಮಾದೇವಿ ವರದಿಗಾರರಿಗೆ ತಿಳಿಸಿದ್ದಾರೆ.
ಗುರುವಾರ ತ್ರಿವಳಿ ತಲಾಖ್ ಕುರಿತು ಗಂಭೀರ ಚರ್ಚೆ ನಡೆಯುತ್ತಿರುವ ಸಮಯದಲ್ಲಿ ಇತರ ಸದಸ್ಯರ ಗದ್ದಲಕ್ಕೆ ಗಮನಕೊಡದೇ ತಮ್ಮನ್ನು ಉದ್ದೇಶಿಸಿ ಮಾತನಾಡುವಂತೆ ಸ್ಪೀಕರ್ ಅನುಪಸ್ಥಿತಿಯಲ್ಲಿ ಕಲಾಪ ನಡೆಸುತ್ತಿದ್ದ ಬಿಜೆಪಿ ಸಂಸದೆ ರಮಾದೇವಿ ಅವರು ಅಜಂ ಖಾನ್ ಅವರಿಗೆ ಸೂಚಿಸಿದ್ದರು. 
ಈ ವೇಳೆ ರಮಾದೇವಿಯವರನ್ನು ಉದ್ದೇಶಿಸಿ ಮಾತನಾಡಿದ ಅಜಂ ಖಾನ್, ‘ಆಪ್ ಕೀ ಆಂಖೋ ಮೇ ಆಂಖೇ ಡಾಲ್ ಕೇ ಬಾತ್ ಕರ್ ನೇ ಕಾ ಮನ್ ಕರ್ ತಾ ಹೈ’ (ನಿಮ್ಮ ಕಣ್ಣಲ್ಲಿ ಕಣ್ಣನಿಟ್ಟು ಮಾತನಾಡುವ ಬಯಕೆ ಉಂಟಾಗುತ್ತಿದೆ) ಎಂದು ಹೆಳಿದರು.
ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿದ ಸಭಾಧ್ಯಕ್ಷರ ಪೀಠದಲ್ಲಿದ್ದ ರಮಾದೇವಿ ಅವರು ‘ಇದು ಮಾತನಾಡುವ ರೀತಿ ಅಲ್ಲ, ಮತ್ತು ಈ ಮಾತುಗಳನ್ನು ಕಡತದಿಂದ ತೆಗೆದು ಹಾಕಿ’ ಎಂದು ಸೂಚನೆ ಕೊಟ್ಟರು.
ಇನ್ನು ಅಜಂ ಖಾನ್ ಹೇಳಿಕೆಯನ್ನು ಲೋಕಸಭೆಯ ಮಹಿಳಾ ಸಂಸದರು ಖಂಡಿಸಿದ್ದು, ಅವರನ್ನು ಸದನದಿಂದ ಅಮಾನತುಗೊಳಿಸಬೇಕು ಎಂದು ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಅವರಿಗೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT