ದೇಶ

ನೂತನ ಸರ್ಕಾರದಲ್ಲಿ ಸ್ಪೀಕರ್‌ ಆಗಿ ಮುಂದುವರಿಯಲು ಇಷ್ಟವಿಲ್ಲ: ರಮೇಶ್ ಕುಮಾರ್

Srinivasamurthy VN
ಬೆಂಗಳೂರು: ನೂತನ ಸರ್ಕಾರದಲ್ಲಿ ಸ್ಪೀಕರ್‌ ಆಗಿ ಮುಂದುವರಿಯಲು ಇಷ್ಟವಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್ ಅವರು, 'ಸಿಎಂ ಆದಮೇಲೆ ಯಡಿಯೂರಪ್ಪನವರು ಸೋಮವಾರ ಬಹಯಮತ ಸಾಬೀತಿಗೆ ಅವಕಾಶ ಕೇಳಿದ್ದಾರೆ. ಇದೇ ವೇಳೆ ಹಣಕಾಸಿನ ಮಸೂದೆಯ ಅಂಗೀಕಾರದ ಮತದಾನಕ್ಕೆ ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ವಿಧಾನಸಭೆಯ ಅಧಿವೇಶನಕ್ಕೆ ಎಲ್ಲ ಸದಸ್ಯರು ಭಾಗವಹಿಸಬೇಕೆಂದು ಕಚೇರಿಯಿಂದ ಸೂಚನಾ ಪತ್ರ ಕಳುಹಿಸಲಾಗಿದೆ. 
ಸ್ಪೀಕರ್ ಆಗಿರುವ ಕಾರಣಕ್ಕೆ ನನ್ನ ಮೇಲೆ ಮಾನಸಿಕ ಒತ್ತಡ ಹಾಕಲಾಗಿದೆ. ಖಿನ್ನನಾಗಿದ್ದಾನೆ. ನನ್ನ ವೈಯಕ್ತಿಕ ಜೀವನದಲ್ಲಿ ತುಳಸಿದಾಸಪ್ಪ, ಅಬ್ದುಲ್ ನಜೀರ್ ಸಾಬ್, ಬಿ.ಎ.ಮೊಯಿದ್ದೀನ್, ಎ.ಕೆ.ಸುಬ್ಬಯ್ಯ ಅವರಂಥವರಿಂದ ನಾನು ಪ್ರಭಾವಿತನಾಗಿದ್ದೇನೆ. ನನ್ನನ್ನು ರೂಪಿಸಿದವರು ಅವರು. ನನ್ನ ನಾಲ್ಕು ದಶಕಗಳ ಜೀವನದ ಪ್ರಮುಖ ಘಟ್ಟ, ಬಹುಶಃ ಕೊನೆಯ ಘಟ್ಟವೂ ಆಗಬಹುದು. ಅತ್ಯಂತ ಭಯ, ಗೌರವ, ಜವಾಬ್ದಾರಿಯನ್ನು ಹೊಟ್ಟೆಯಲ್ಲಿಟ್ಟುಕೊಂಡು ನಾನು ಈ ತೀರ್ಮಾನಕ್ಕೆ ಬಂದಿದ್ದೇನೆ ಎಂದು ಹೇಳಿದರು.
ಅಂತೆಯೇ ನೂತನ ಸರ್ಕಾರದಲ್ಲಿ ನನಗೆ ಸ್ಪೀಕರ್‌ ಆಗಿ ಮುಂದುವರಿಯಲು ಇಷ್ಟವಿಲ್ಲ. ಎಲ್ಲವನ್ನು ಸೋಮವಾರ ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಸ್ಪಷ್ಟಪಡಿಸುತ್ತೇನೆ ಎಂದು ಸ್ಪೀಕರ್ ರಮೇಶ್‌ ಕುಮಾರ್ ಹೇಳಿದರು.
SCROLL FOR NEXT