ಜೈಪಾಲ್ ರೆಡ್ಡಿ 
ದೇಶ

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜೈಪಾಲ್ ರೆಡ್ಡಿ ಇನ್ನಿಲ್ಲ

ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಜೈಪಾಲ್ ರೆಡ್ಡಿ ಅವರು ಹೈದರಾಬಾದ್‌ನಲ್ಲಿ ಭಾನುವಾರ ಮುಂಜಾನೆ ನಿಧನ ಹೊಂದಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಹೈದರಾಬಾದ್: ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಜೈಪಾಲ್ ರೆಡ್ಡಿ ಅವರು ಹೈದರಾಬಾದ್‌ನಲ್ಲಿ ಭಾನುವಾರ ಮುಂಜಾನೆ ನಿಧನ ಹೊಂದಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. 
 77 ವರ್ಷದ ರೆಡ್ಡಿ ಅವರಿಗೆ ಇತ್ತೀಚೆಗೆ ನ್ಯುಮೋನಿಯಾ ಇರುವುದು ಪತ್ತೆಯಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಲ್ಲಿ ಅವರು ಮುಂಜಾನೆ 1.28 ಕ್ಕೆ ನಿಧನರಾದರು.
ಜೈಪಾಲ್ ರೆಡ್ಡಿ 1984 ರಿಂದ ದಶಕಗಳ ಕಾಲ ಸಂಸದರಾಗಿದ್ದರು ಮತ್ತು ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿರ್ವಹಿಸಿದ್ದರು.
ಐಕೆ ಗುಜ್ರಾಲ್ ಸರ್ಕಾರದಲ್ಲಿ ಮಾಹಿತಿ ಮತ್ತು ಪ್ರಸಾರ ಸಚಿವರಾಗಿದ್ದ ರೆಡ್ಡಿ ಯುಪಿಎ -1 ಸರ್ಕಾರದ ಅವಧಿಯಲ್ಲಿನಗರಾಭಿವೃದ್ದಿ ಮತ್ತು ಸಂಸ್ಕೃತಿ ಖಾತೆ ನಿರ್ವಹಿಸಿದ್ದರು. ಯುಪಿಎ -2 ರಲ್ಲಿ ಅವರನ್ನು ಮತ್ತೆ ನಗರಾಭಿವೃದ್ಧಿ ಸಚಿವರನ್ನಾಗಿ ನೇಮಕ ಮಾಡಲಾಗಿತ್ತು.  ನಂತರ, ಅವರು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲದ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.ಅಲ್ಲದೆ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಭೂ ವಿಜ್ಞಾನ ಸಚಿವರೂ ಆಗಿದ್ದರು.
ಅವರು ಲೋಕಸಭೆಯಲ್ಲಿ ತೆಲಂಗಾಣದ ಚೆವೆಲ್ಲಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!