ಕೈಲಾಶ್ ವಿಜಯ್ ವರ್ಗಿಯಾ 
ದೇಶ

ಕರ್ನಾಟಕ ಸಂಪುಟ ರಚನೆ ನಂತರ 'ಹೊಸ ಮಿಷನ್' ಆರಂಭ - ಕೈಲಾಶ್ ವಿಜಯ್ ವರ್ಗೀಯಾ

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಸಂಪುಟ ರಚನೆ ಪ್ರಕ್ರಿಯೆ ಮುಗಿದ ನಂತರ ಹೊಸ ಮಿಷನ್ ಗೆ ಚಾಲನೆ ನೀಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗಿಯಾ ಹೇಳಿದ್ದಾರೆ.

ಭೂಪಾಲ್ : ಮಧ್ಯಪ್ರದೇಶದಲ್ಲಿನ ರಾಜಕೀಯ ಬೆಳವಣಿಗೆ ಕುರಿತಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗಿಯಾ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಸಂಪುಟ ರಚನೆ ಪ್ರಕ್ರಿಯೆ ಮುಗಿದ ನಂತರ ಹೊಸ ಮಿಷನ್ ಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.
ಮಧ್ಯ ಪ್ರದೇಶದಲ್ಲಿನ ಕಾಂಗ್ರೆಸ್ ಆಡಳಿತದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಮಲ್ ನಾಥ್ ನೇತೃತ್ವದ ಸರ್ಕಾರವನ್ನು ಬೀಳಿಸುವುದು ನಮ್ಮ ಉದ್ದೇಶವಲ್ಲಾ, ಆದರೆ, ಕಾಂಗ್ರೆಸ್ ಶಾಸಕರು ಅನಿಶ್ಚಿತತೆ ಹೊಂದಿದ್ದಾರೆ .ಕರ್ನಾಟಕದಲ್ಲಿ ಕಾಂಗ್ರೆಸ್- ಜೆಡಿಎಸ್ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸಂಪುಟ ರಚನೆ ಬಳಿಕ ಹೊಸ ಮಿಷನ್  ಆರಂಭಿಸಲಾಗುವುದು ಎಂದರು.
ಕಾಂಗ್ರೆಸ್ ಶಾಸಕರಿಗೆ ಅವರ ನಾಯಕತ್ವದ ಬಗ್ಗೆ ವಿಶ್ವಾಸವಿಲ್ಲ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಬಗ್ಗೆ ಒಳ್ಳೇಯ ಅಭಿಪ್ರಾಯ ಹೊಂದಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರ ಸ್ವಂತ ಕೆಲಸಗಳಿಂದಾಗಿ ಅಲ್ಲಿನ ಸರ್ಕಾರ ಹಾಗೂ ಕಾಂಗ್ರೆಸ್ ಪತನವಾಗಲಿದೆ ಎಂದು ಅವರು ಭವಿಷ್ಯ ನುಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT