ಹೈದ್ರಾಬಾದ್: ಭಾನುವಾರ ಬೆಳಗ್ಗೆ ನಿಧನರಾಗಿದ್ದ ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಜೈಪಾಲ್ ರೆಡ್ಡಿ ಅಂತ್ಯಕ್ರಿಯೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ವಿಧಾನಸಭಾ ಮಾಜಿ ಸ್ಪೀಕರ್ ಕೆ. ಆರ್. ರಮೇಶ್ ಕುಮಾರ್, ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆಯ ಪ್ರತಿಪಕ್ಷ ನಾಯಕ ಗುಲಾಂ ನಬಿ ಅಜಾದ್ ಸೇರಿದಂತೆ ಹಲವು ಹಿರಿಯ ನಾಯಕರು ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು.
ವಿಶೇಷವಾಗಿ ಸಿದ್ಧರಾಮಯ್ಯ ಹಾಗೂ ರಮೇಶ್ ಕುಮಾರ್ ಅವರು ಜೈಪಾಲ್ ರೆಡ್ಡಿ ಪಾರ್ಥಿವ ಶರೀರಕ್ಕೆ ಹೆಗಲು ನೀಡುವ ಮೂಲಕ ತಮ್ಮ ಆಪ್ತ ಮಿತ್ರನಿಗೆ ಅಂತಿಮ ನಮನ ಸಲ್ಲಿಸಿದರು.
ಜೈಪಾಲ್ ರೆಡ್ಡಿ ಅಂತಿಮ ಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯ ಕಾಂಗ್ರೆಸ್ಸಿಗರು ಭಾಗವಹಿಸಿದ್ದರು. ಕರ್ನಾಟಕ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿಶ್ವಾಸ ಮತ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿದ ನಂತರ ಕೆ.ಆರ್.ರಮೇಶ್ಕುಮಾರ್ ಹಾಗೂ ಸಿದ್ದರಾಮಯ್ಯ ಹೈದರಾಬಾದ್ ತಲುಪಿ ಅಂತ್ಯಕ್ರಿಯೆಯಲ್ಲಿ ಭಾಗಿಯಾದರು.