ಕೇರಳ: ದಲಿತ ಶಾಸಕಿ ಪ್ರತಿಭಟನೆ ನಂತರ ಸಗಣಿ ನೀರು ಸಿಂಪಡಿಸಿ ಕಚೇರಿ ಶುದ್ದೀಕರಿಸಿದ ಕಾಂಗ್ರೆಸ್! 
ದೇಶ

ಕೇರಳ: ದಲಿತ ಶಾಸಕಿ ಪ್ರತಿಭಟನೆ ನಂತರ ಸಗಣಿ ನೀರು ಸಿಂಪಡಿಸಿ ಕಚೇರಿ ಶುದ್ದೀಕರಿಸಿದ ಕಾಂಗ್ರೆಸ್!

ದಲಿತ ಶಾಸಕಿಯೊಬ್ಬರು ಪ್ರತಿಭಟನೆ ನಡೆಸಿದ್ದರೆಂಬ ಕಾರಣಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ಸಗಣಿ ನೀರು ಸಿಂಪಡಿಸಿ ಪಿಡಬ್ಲ್ಯುಡಿ ಕಚೇರಿಯನ್ನು ಶುದ್ಧೀಕರಿಸಿರುವ ವಿಲಕ್ಷಣ ಘಟನೆ ಕೇರಳದಲ್ಲಿ ನಡೆದಿದೆ.

ತಿರುವನಂತಪುರಂ: ದಲಿತ ಶಾಸಕಿಯೊಬ್ಬರು ಪ್ರತಿಭಟನೆ ನಡೆಸಿದ್ದರೆಂಬ ಕಾರಣಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ಸಗಣಿ ನೀರು ಸಿಂಪಡಿಸಿ  ಪಿಡಬ್ಲ್ಯುಡಿ ಕಚೇರಿಯನ್ನು ಶುದ್ಧೀಕರಿಸಿರುವ ವಿಲಕ್ಷಣ ಘಟನೆ ಕೇರಳದಲ್ಲಿ ನಡೆದಿದೆ.
ಕೇರಳದ ತ್ರಿಶೂರ್ ಜಿಲ್ಲೆಯ ನಾಟಿಕಾ ವಿಧಾನಸಭೆ ಕ್ಷೇತ್ರದ ಸಿಪಿಐ ದಲಿತ ಶಾಸಕಿ ಗೀತಾ ಗೋಪಿ ಶನಿವಾರ ತಮ್ಮ ಕ್ಷೇತ್ರದ ರಸ್ತೆಗಳ ದುರವಸ್ಥೆಯನ್ನು ಖಂಡಿಸಿ ಪಿಡಬ್ಲ್ಯುಡಿ ಕಚೇರಿ ಎದುರು ಧರಣಿ ನಡೆಸಿದ್ದರು. ಆ ವೇಳೆ ರಸ್ತೆ ಸರಿಪಡಿಸಲು ಕ್ರಮ ತೆಗೆದುಕೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ ಬಳಿಕ ಅವರು ತಮ್ಮ ಪ್ರತಿಭಟನೆ ಹಿಂಪಡೆದಿದ್ದರು.
ಆದರೆ ಶಾಸಕಿ ಕಚೇರಿಯಿಂದ ಹೊರಬಂದ ನಂತರ ಯುವ ಕಾಂಗ್ರೆಸ್ ಕಾರ್ಯಕರ್ತರು ಕಚೇರಿಗೆ ಸಗಣಿ ನೀರು ಸಿಂಪಡಿಸಿ "ಶುದ್ಧೀಕರಣ" ಆಚರಣೆಗಳನ್ನು  ನಡೆಸಿದ್ದಾರೆ.
ಈ ಸಂಬಂಧ ಶಾಸಕಿ ಪೋಲೀಸರಿಗೆ ದೂರಿತ್ತಿದ್ದು ಯುವ ಕಾಂಗ್ರೆಸ್ ಕಾರ್ಯಕರ್ತರು ಜಾತಿ ಆಧಾರಿತ ತಾರತಮ್ಯ ಮತ್ತು ನಿಂದನೆ ಮಾಡಿದ್ದಾಗಿ ದೂರಿನಲ್ಲಿ ಹೇಳಲಾಗಿದೆ.
ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಯುವ ಕಾಂಗ್ರೆಸ್ ಅಧ್ಯಕ್ಷ ಡೀನ್ ಕುರಿಯಾಕೋಸ್ ಜಾತಿ ಆಧಾರಿತ ತಾರತಮ್ಯ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT