ಸಂಗ್ರಹ ಚಿತ್ರ 
ದೇಶ

ತ್ರಿವಳಿ ತಲಾಖ್: ರಾಜ್ಯಸಭೆ ಕಲಾಪದಿಂದ ಹೊರ ನಡೆದ ಜೆಡಿಯು, ಬಿಜೆಪಿ ಹಾದಿ ಸುಗಮ!

ಅನರೀಕ್ಷಿತ ಬೆಳವಣಿಗೆಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ರಾಜ್ಯಸಭೆ ಕಲಾಪದಿಂದ ಹೊರ ನಡೆದಿದ್ದು, ತೀವ್ರ ಕುತೂಹಲ ಕೆರಳಿಸಿರುವ ತ್ರಿವಳಿ ತಲಾಖ್ ಮಸೂದೆಗೆ ಅನುಮೋದನೆ ದೊರೆಯುವುದು ಬಹುತೇಕ ಖಚಿತವಾದಂತಾಗಿದೆ.

ನವದೆಹಲಿ: ಅನರೀಕ್ಷಿತ ಬೆಳವಣಿಗೆಯಲ್ಲಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ರಾಜ್ಯಸಭೆ ಕಲಾಪದಿಂದ ಹೊರ ನಡೆದಿದ್ದು, ತೀವ್ರ ಕುತೂಹಲ ಕೆರಳಿಸಿರುವ ತ್ರಿವಳಿ ತಲಾಖ್ ಮಸೂದೆಗೆ ಅನುಮೋದನೆ ದೊರೆಯುವುದು ಬಹುತೇಕ ಖಚಿತವಾದಂತಾಗಿದೆ.
ಹೌದು.. ಈ ಹಿಂದೆ ಲೋಕಸಭೆಯಲ್ಲಿ ಅನುಮೋದನೆ ಪಡೆದಿದ್ದ ತ್ರಿವಳಿ ತಲಾಖ್ ಮಸೂದೆಯನ್ನು ಇಂದು ರಾಜ್ಯಸಭೆಯಲ್ಲಿ ಮಂಡಿಸಲಾಗಿದ್ದು, ಮಸೂದೆ ಮೇಲಿನ ಚರ್ಚೆ ಸಂದರ್ಭದಲ್ಲೇ ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಸದಸ್ಯರು  ಸಭಾತ್ಯಾಗ ಮಾಡಿದ್ದಾರೆ. ಪರಿಣಾಮ ತ್ರಿವಳಿ ತಲಾಖ್ ಮಸೂದೆಗೆ ಅನುಮೋದನೆ ಪಡೆಯಬೇಕು ಎಂಬ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಾದಿ ಸುಗಮವಾದಂತಾಗಿದೆ.
ಒಟ್ಟು 241 ಸದಸ್ಯ ಬಲದ ರಾಜ್ಯಸಭೆಯಲ್ಲಿ ಮಸೂದೆ ಅನುಮೋದನೆಗೆ 121 ಸದಸ್ಯರ ಅಗತ್ಯವಾಗಿತ್ತು. ಆದರೆ ಈಗ 6 ಸದಸ್ಯರನ್ನು ಹೊಂದಿರುವ ಜೆಡಿಯು ರಾಜ್ಯಸಭೆ ಕಲಾಪದಿಂದ ಸಭಾತ್ಯಾಗ ಮಾಡಿದ್ದು, ರಾಜ್ಯಸಭೆ ಸದಸ್ಯರ ಸಂಖ್ಯೆ 235ಕ್ಕೆ ಕುಸಿದಿದೆ. ಅಂತೆಯೇ ಅಗತ್ಯ ಬಹುಮತ ಕೂಡ 118ಕ್ಕೆ ಕುಸಿದಿದೆ. ಪ್ರಸ್ತುತ ಎನ್ ಡಿಎ ಮೈತ್ರಿ ಕೂಟ ಬಿಜೆಡಿ, ಟಿಆರ್ ಎಸ್ ಸದಸ್ಯರ ಬೆಂಬಲದೊಂದಿಗೆ 107 ಬೆಂಬಲಿತ ಸದಸ್ಯರನ್ನು ಹೊಂದಿದೆ. ಇನ್ನೂ ಅದಕ್ಕೆ 11 ಸದಸ್ಯರ ಬೆಂಬಲ ಬೇಕಿದ್ದು, ಇತರೆ ಪಕ್ಷಗಳಿಂದ ತ್ರಿವಳಿ ತಲಾಖ್ ಗೆ ಬೆಂಬಲ ನೀಡಿರುವ ಸದಸ್ಯರು ಕೂಡ ಇದ್ದಾರೆ. ಅದರೊಂದಿಗೆ ತ್ರಿವಳಿ ತಲಾಖ್ ಬೆಂಬಲಿತ ಸದಸ್ಯರ ಸಂಖ್ಯೆ ರಾಜ್ಯಸಭೆಯಲ್ಲಿ 120ಕ್ಕೆ ಏರಿಕೆಯಾಗಿದೆ. 
ಹೀಗಾಗಿ ಈ ಬಾರಿ ಕೇಂದ್ರ ಸರ್ಕಾರ ಅನಾಯಾಸವಾಗಿ ತ್ರಿವಳಿ ತಲಾಖ್ ಗೆ ಅನುಮೋದನೆ ಪಡೆದು ರಾಷ್ಟ್ರಪತಿಗಳ ಅಂಕಿತಕ್ಕೆ ರವಾನೆ ಮಾಡಲಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT