ಸಂಗ್ರಹ ಚಿತ್ರ 
ದೇಶ

ಸುಷ್ಮಾ ಸ್ವರಾಜ್ ಹಾದಿಯಲ್ಲೇ ಸಾಗಲು ಹೆಮ್ಮೆಯಾಗುತ್ತದೆ: ಜೈ ಶಂಕರ್

ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಸಾಗಿದ ಹಾದಿಯಲ್ಲೇ ಸಾಗಲು ಹೆಮ್ಮೆಯಾಗುತ್ತದೆ ಎಂದು ನೂತನ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ನವದೆಹಲಿ: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಸಾಗಿದ ಹಾದಿಯಲ್ಲೇ ಸಾಗಲು ಹೆಮ್ಮೆಯಾಗುತ್ತದೆ ಎಂದು ನೂತನ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
ವಿದೇಶಾಂಗ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಟ್ವೀಟ್ ಮಾಡಿರುವ ಜೈ ಶಂಕರ್ ಅವರು, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ. ಇಲ್ಲಿಯವರೆಗೆ ಟ್ವಿಟರ್ ಖಾತೆಯಿಂದ ದೂರವೇ ಉಳಿದಿದ್ದ ಮಾಜಿ ವಿದೇಶಾಂಗ ಕಾರ್ಯದರ್ಶಿ, ಪ್ರಸ್ತುತ ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಹೊಸದಾಗಿ ಟ್ವಿಟರ್ ಖಾತೆ ತೆರೆದು ಹಿಂದಿನ ಉತ್ತರಾಧಿಕಾರಿ ಸುಷ್ಮಾ ಸ್ವರಾಜ್ ಹಾದಿಯನ್ನೇ ಅನುಸರಿಸುವುದಾಗಿ ತಿಳಿಸಿದ್ದಾರೆ. ಅಲ್ಲದೆ ನನ್ನ ಸಂಪುಟ ಸಹೋದ್ಯೋಗಿ ಮುರಳೀಧರನ್ ಅವರ ಜೊತೆಯಾಗಿ ನಿಮ್ಮ ಸೇವೆ ಮಾಡಲು ದಿನ 24 ಗಂಟೆಗಳ ಕಾಲ ಸಿದ್ಧರಾಗಿದ್ದೇವೆ ಎಂದು ಹೇಳಿದ್ದಾರೆ. 
ಅನಾರೋಗ್ಯದ ಕಾರಣದಿಂದ ಲೋಕಸಭಾ ಚುನಾವಣೆಯಿಂದ ದೂರವೇ ಉಳಿದ ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್, ಬದಲಿಗೆ ಮೋದಿ ಅವರು ತಮ್ಮ ಎರಡನೇ ಅವಧಿಯ ಸಂಪುಟಕ್ಕೆ ಜೈ ಶಂಕರ್ ಅವರನ್ನು ಸೇರಿಸಿಕೊಂಡು ಅವರಿಗೆ ವಿದೇಶಾಂಗ ಖಾತೆಯ ಪ್ರಮುಖ ಹೊಣೆಗಾರಿಕೆಯನ್ನು ನೀಡಿದ್ದಾರೆ. ಭಾರತ- ಅಮೆರಿಕ ಪರಮಾಣು ಒಪ್ಪಂದ ವಿಚಾರದಲ್ಲಿ ಎರಡೂ ದೇಶಗಳ ಸಂಬಂಧ ಉದ್ವಿಗ್ನ ಸ್ಥಿತಿಗೆ ಹೋಗುತ್ತಿದ್ದ ಸಮಯದಲ್ಲಿ ಅದನ್ನು ಜೈಶಂಕರ್ ಅವರು ಬಹಳ ಜಾಣ್ಮೆಯಿಂದ ನಿರ್ವಹಣೆ ಮಾಡಿ ಮೋದಿ ಅವರ ಮೆಚ್ಚುಗೆಗೆ ಪಾತ್ರವಾಗಿದ್ದರು. 
ಈ ನಡುವೆ ಸುಷ್ಮಾ ಅವರನ್ನು ಸಂಪುಟದಿಂದ ಕೈ ಬಿಟ್ಟಿರುವ ಬಗ್ಗೆ ಅನೇಕ ಜನರು ಮತ್ತು ಅನಿವಾಸಿ ಭಾರತಿಯರು ಟ್ವಿಟರ್ ಮತ್ತು ಸಾಮಾಜಿಕ ಜಾಲತಾಣದ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.  ಭಾರತೀಯರು ವಿಸಾ ಹಾಗೂ ಇನ್ನಿತರ ಸಮಸ್ಯೆಗಳಿಗೆ ಸಿಲುಕಿದಾಗ ತಕ್ಷಣವೇ ಅವುಗಳ ಪರಿಹಾರಕ್ಕೆ ಸುಷ್ಮಾ ಸ್ವರಾಜ್ ಗಮನ ಹರಿಸುತ್ತಿದ್ದರು. 
ಹೀಗಾಗಿ ಅವರು ದೇಶ ಮತ್ತು ಅನಿವಾಸಿ ಭಾರತೀಯರ ಜೊತೆ ತಮ್ಮದೇ ಆದ ಒಡನಾಟ ಇಟ್ಟುಕೊಂಡಿದ್ದರು. ಅವರನ್ನು ಸಂಪುಟದಿಂದ ಕೈ ಬಿಟ್ಟಿರುವ ಬಗ್ಗೆ ಹಲವು ಅನಿವಾಸಿ ಭಾರತೀಯರು ಜಾಲತಾಣದ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗೋವಾ ನೈಟ್ ಕ್ಲಬ್​ನಲ್ಲಿ ಭೀಕರ ಅಗ್ನಿ ದುರಂತ: ಪ್ರವಾಸಿಗರು ಸೇರಿ 25 ಮಂದಿ ಸಜೀವ ದಹನ, ತನಿಖೆಗೆ ಆದೇಶ

ಕಾಂಗ್ರೆಸ್ ಕುರ್ಚಿ ಕದನ: ಸೋನಿಯಾ ಗಾಂಧಿ ನೇತೃತ್ವದ ಮಹತ್ವದ ಸಭೆ, ತೆಗೆದುಕೊಂಡ ನಿರ್ಧಾರವೇನು..?

ಗೋವಾ ನೈಟ್ ಕ್ಲಬ್​ ಅಗ್ನಿ ದುರಂತ: ಪ್ರಧಾನಿ ಮೋದಿ, ರಾಷ್ಟ್ರಪತಿ ತೀವ್ರ ಸಂತಾಪ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ಎಸ್‌ಸಿ-ಎಸ್‌ಟಿ ಕೋಟಾ ಹೆಚ್ಚಳಕ್ಕೆ ಪ್ರಧಾನಿ ಸಹಾಯ ಕೋರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಉಗ್ರಪ್ಪ ಒತ್ತಾಯ

ಮುಂದಿನ ವರ್ಷದಿಂದ 1 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ: ಮಧು ಬಂಗಾರಪ್ಪ

SCROLL FOR NEXT