ಮಮತಾ ಬ್ಯಾನರ್ಜಿ 
ದೇಶ

ಪಶ್ಚಿಮ ಬಂಗಾಳ: ದೀದಿಗೆ 10 ಲಕ್ಷ ಜೈ ಶ್ರೀ ರಾಮ್ ಅಂಚೆ ಕಾರ್ಡ್ಸ್ ರವಾನೆ- ಬಿಜೆಪಿ ಮುಖಂಡ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಜೈ ಶ್ರೀರಾಮ್ ಎಂದು ಬರೆದಿರುವ 10 ಲಕ್ಷ ಅಂಚೆ ಕಾರ್ಡ್ ಗಳನ್ನು ರವಾನಿಸಲಾಗುವುದು ಎಂದು ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ.

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಜೈ ಶ್ರೀರಾಮ್ ಎಂದು ಬರೆದಿರುವ 10 ಲಕ್ಷ  ಅಂಚೆ ಕಾರ್ಡ್ ಗಳನ್ನು ರವಾನಿಸಲಾಗುವುದು ಎಂದು ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ.

ಜೈ ಶ್ರೀರಾಮ್ ಎಂದು ಬರೆದಿರುವ 10 ಲಕ್ಷ ಅಂಚೆ ಕಾರ್ಡ್ ಗಳನ್ನು ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ರವಾನಿಸಲು ನಿರ್ಧರಿಸಲಾಗಿದೆ ಎಂದು ಹೊಸದಾಗಿ ಆಯ್ಕೆಯಾಗಿರುವ ಶಾಸಕ ಅರ್ಜುನ್ ಸಿಂಗ್ ಹೇಳಿದ್ದಾರೆ.

ಮಾಜಿ ತೃಣಮೂಲ ಕಾಂಗ್ರೆಸ್ ಶಾಸಕರಾಗಿರುವ ಅರ್ಜುನ್ ಸಿಂಗ್  ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಸೇರ್ಪಡೆಯಾಗಿದ್ದರು.  ಟಿಎಂಸಿ ಸಭೆ ಹೊರಗಡೆ ನಡೆಯುತ್ತಿದ್ದ ಪ್ರತಿಭಟನೆ ವೇಳೆಯಲ್ಲಿ ಜೈ ಶ್ರೀ ರಾಮ್ ಎಂದು ಕೂಗಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ಲಾಠಿ ಚಾರ್ಚ್ ನಡೆಸಿದ ನಂತರ ಅರ್ಜುನ್ ಸಿಂಗ್ ಈ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ.

ಅರ್ಜುನ್ ಸಿಂಗ್ , ಹಾಗೂ ಬಿಜೆಪಿ ಮುಖಂಡ ಮುಕುಲ್ ರಾಯ್ ಮಗ ಸುಬ್ರಂಗ್ಶು ರಾಯ್   ಟಿಎಂಸಿ ತೊರೆದು ಬಿಜೆಪಿಗೆ ಸೇರಿದ ನಂತರ ಈ ಪ್ರದೇಶದಲ್ಲಿ ತುಂಬಾ ತೊಂದರೆ ನೀಡುತ್ತಿದ್ದಾರೆ ಎಂದು ಟಿಎಂಸಿ ಮುಖಂಡ ಜ್ಯೋತಿಪ್ರಿಯಾ ಮಲಿಕ್ ಹೇಳಿದ್ದಾರೆ.

ಮಲ್ಲಿಕ್ ಮತ್ತಿತರು ಸಭೆ ನಡೆಸುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾದಾಗ ಪರಿಸ್ಥಿತಿ ಕೈ ಮೀರಿದ್ದು, ಪೊಲೀಸರು ಲಾಠಿ ಚಾರ್ಚ್ ನಡೆಸಿರುವುದಾಗಿ ತಿಳಿದುಬಂದಿದೆ.

ಬಂಗಾಳದಲ್ಲಿ ಇಂತಹ ಸಂಸ್ಕೃತಿಯನ್ನು ನೋಡಿರಲಿಲ್ಲ, ಇದು ಬಿಜೆಪಿಯ ಸಂಸ್ಕೃತಿಯಾಗಿದೆ ಎಂದು ಮಲ್ಲಿಕ್ ಹೇಳಿದ್ದು, ಪ್ರತಿಭಟನಾಕಾರರು ತಮ್ಮ ಕಾರಿನ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT