ಕೆ ಸಿ ತ್ಯಾಗಿ 
ದೇಶ

ಜೆಡಿಯು ಎಂದಿಗೂ ಎನ್ ಡಿಎ ನಾಯಕತ್ವದ ಕೇಂದ್ರ ಸಂಪುಟದ ಭಾಗವಾಗಿರುವುದಿಲ್ಲ- ಕೆಸಿ ತ್ಯಾಗಿ

ಜೆಡಿಯು ಎಂದಿಗೂ ಎನ್ ಡಿಎ ನಾಯಕತ್ವದ ಕೇಂದ್ರ ಸಂಪುಟದ ಭಾಗವಾಗಿರುವುದಿಲ್ಲ ಎಂದು ಜೆಡಿಯು ಪ್ರಧಾನ ಕಾರ್ಯದರ್ಶಿ ಹಾಗೂ ಮುಖ್ಯ ವಕ್ತಾರ ಕೆ. ಸಿ. ತ್ಯಾಗಿ ಹೇಳಿದ್ದಾರೆ.

ಪಾಟ್ನಾ: ಜೆಡಿಯು ಎಂದಿಗೂ ಎನ್ ಡಿಎ ನಾಯಕತ್ವದ ಕೇಂದ್ರ ಸಂಪುಟದ ಭಾಗವಾಗಿರುವುದಿಲ್ಲ ಎಂದು ಜೆಡಿಯು ಪ್ರಧಾನ ಕಾರ್ಯದರ್ಶಿ ಹಾಗೂ ಮುಖ್ಯ ವಕ್ತಾರ ಕೆ. ಸಿ. ತ್ಯಾಗಿ ಹೇಳಿದ್ದಾರೆ.

ಎನ್ ಡಿಎ ಕೇಂದ್ರ ಸಂಪುಟದಲ್ಲಿ ಬಿಹಾರಕ್ಕೆ ಕೇವಲ ಒಂದು ಸಚಿವ ಸ್ಥಾನ ನೀಡಿರುವುದರಿಂದ ಅಸಮಾಧಾನಗೊಂಡು ಜೆಡಿಯು ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.

ಜೆಡಿಯುನ ಪ್ರಸ್ತಾವವನ್ನು ತಿರಸ್ಕರಿಸಲಾಗಿದೆ. ಆದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದೇ ನಮ್ಮ ಅಂತಿಮ ನಿರ್ಧಾರವಾಗಿದೆ. ಮುಂದೆಯೂ ಕೂಡಾ  ಜೆಡಿಯು ಎನ್ ಡಿಎ ನಾಯಕತ್ವದ ಕೇಂದ್ರ ಸಂಪುಟದ ಭಾಗವಾಗಿರುವುದಿಲ್ಲ ಎಂದು ತ್ಯಾಗಿ ಹೇಳಿದ್ದಾರೆ.

ಇತ್ತೀಚಿಗೆ ನಡೆದ ನೂತನ ಕೇಂದ್ರ ಸಂಪುಟದಲ್ಲಿ ಎನ್ ಡಿಎ ಅಂಗಪಕ್ಷಗಳಾದ  ಜೆಡಿಯು, ರಾಮ್ ವಿಲಾಸ್ ಪಾಸ್ವನ್ ನೇತೃತ್ವದ ಎಲ್ ಜೆಎಸ್ ಪಿ, ಅಕಾಲಿ ದಳ, ಶಿವಸೇನಾ ಹಾಗೂ ಆರ್ ಪಿಐ ಪಕ್ಷಗಳಿಗೆ ತಲಾ ಒಂದು 1 ಸಚಿವ ಸ್ಥಾನವನ್ನು ನೀಡಲಾಗಿದೆ.  ಆದರೆ, ಜೆಡಿಯುಗೆ ಕೇವಲ ಸಚಿವ ಸ್ಥಾನ ನೀಡಿರುವುದೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ.

ಬಿಹಾರದಲ್ಲಿ ಲೋಕಸಭಾ ಚುನಾವಣೆಯಲ್ಲಿ  ಜೆಡಿಯು 16 , ಬಿಜೆಪಿ 17 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು. ಬಿಜೆಪಿಯ ಸುಶೀಲ್ ಕುಮಾರ್ ಮೋದಿ ಬಿಹಾರ ಸರ್ಕಾರದಲ್ಲಿ  ಉಪಮುಖ್ಯಮಂತ್ರಿಯಾಗಿದ್ದಾರೆ. ಈಗ ಹೊಸದಾಗಿ ಜೆಡಿಯುನ 8 ಶಾಸಕರನ್ನು ಸಚಿವರನ್ನಾಗಿ ಮಾಡಲಾಗಿದೆ. 
ಆದಾಗ್ಯೂ,  ಬಿಜೆಪಿ ಜೊತೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಎಲ್ಲವೂ  ಸುಗಮವಾಗಿದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT