ಸಂಗ್ರಹ ಚಿತ್ರ 
ದೇಶ

ಬೈಕ್ ಸಹಿತ ಬಾವಿಗೆ ಬಿದ್ದ ವ್ಯಕ್ತಿ, 2 ದಿನಗಳ ಬಳಿಕ ಸಾರ್ವಜನಿಕರಿಂದ ರಕ್ಷಣೆ

ರಸ್ತೆಯಲ್ಲಿ ಚಲಿಸುವಾಗ ಆಯತಪ್ಪಿ ಬೈಕ್ ಸಹಿತ ಬಾವಿಯಲ್ಲಿ ಬಿದ್ದಿದ್ದ ದ್ವಿಚಕ್ರ ವಾಹನ ಸವಾರನನ್ನು 2 ದಿನಗಳ ಬಳಿಕ ಸಾರ್ವಜನಿಕರು ರಕ್ಷಿಸಿರುವ ಘಟನೆ ತೆಲಂಗಾಣದಲ್ಲಿ ಶನಿವಾರ ರಾತ್ರಿ ನಡೆದಿದೆ.

ವರಂಗಲ್: ರಸ್ತೆಯಲ್ಲಿ ಚಲಿಸುವಾಗ ಆಯತಪ್ಪಿ ಬೈಕ್ ಸಹಿತ ಬಾವಿಯಲ್ಲಿ ಬಿದ್ದಿದ್ದ ದ್ವಿಚಕ್ರ ವಾಹನ ಸವಾರನನ್ನು 2 ದಿನಗಳ ಬಳಿಕ ಸಾರ್ವಜನಿಕರು ರಕ್ಷಿಸಿರುವ ಘಟನೆ ತೆಲಂಗಾಣದಲ್ಲಿ ಶನಿವಾರ ರಾತ್ರಿ ನಡೆದಿದೆ. 
ತೆಲಂಗಾಣದ ವರಂಗಲ್ ಜಿಲ್ಲೆಯ ಮುಚಾರ್ಲಾ ನಗರಂ ಪ್ರದೇಶದಲ್ಲಿ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ದ್ವಿಚಕ್ರವಾಹನದಲ್ಲಿ ಚಲಿಸುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದಿದ್ದಾನೆ. ಬಿದ್ದ ಕೂಡಲೆ ಆತ ಬಾವಿಯೊಳಗಿನಿಂದಲೇ ಕೂಗಿಕೊಂಡು, ಕಿರುಚಿದರೂ ಯಾರೂ ಕೇಳಿಸಿಕೊಂಡಿರಲಿಲ್ಲ. ಈತ ಬಿದ್ದ ಬಾವಿಯ ಸಮೀಪ ಜನರು ಓಡಾಟ ಅಷ್ಟೇನೂ ಇರಲಿಲ್ಲ. ಹೀಗಾಗಿ ಆತ ಬಾವಿಗೆ ಬಿದ್ದ ವಿಚಾರ ಯಾರ ಗಮನಕ್ಕೂ ಬಂದಿಲ್ಲ.
ಶನಿವಾರ ಸಾರ್ವಜನಿಕರೊಬ್ಬರು ಆ ಬಾವಿಯ ಬಳಿ ಬಂದು ಗಮನಿಸಿದಾಗ ಈತ ಬಾವಿಯಲ್ಲಿ ಬಿದ್ದಿದ್ದು ನರಳಾಡುತ್ತಿದುದು ಕಂಡು ಬಂದಿದೆ. ಕೂಡಲೆ ಆತ ಇತರರಿಗೂ ಮಾಹಿತಿ ನೀಡಿದ್ದು, ಜನರು ಜಮಾಯಿಸಿ ಹಗ್ಗಗಳನ್ನು ಬಳಸಿ ಆತನನ್ನು ಮೇಲೆತ್ತಿದ್ದಾರೆ. ನಂತರ ಬೈಕ್ ಅನ್ನೂ ಹೊರತೆಗೆದಿದ್ದಾರೆ. ಪ್ರಸ್ತುತ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ಕುವೈತ್‌ ಪ್ರಮುಖ ತೈಲ ಶುದ್ಧೀಕರಣ ಘಟಕದ ಮೇಲೆ ಇರಾನ್ ಡ್ರೋನ್ ದಾಳಿ, ಭಾರೀ ಬೆಂಕಿ

ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ಬೇಡ: ಟ್ರಂಪ್ ಸೂಚನೆ ಬೆನ್ನಲ್ಲೇ ಹಿಂದೆ ಸರಿದ ಇಸ್ರೇಲ್, ಇರಾನ್ 'ನಾಶವಾಗಿದೆ' ಎಂದ ನೆತನ್ಯಾಹು

Video: ನಮ್ಮ ಮೆಟ್ರೋದಲ್ಲಿ ಹಾಡು ಹಾಡಿ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡಿದ 11 ಯುವತಿಯರ ಬಂಧನ

Iran-Israel War: ಗಲ್ಫ್ ವಾಯುಪ್ರದೇಶ ಸಂಚಾರ ತಪ್ಪಿಸಿ; ವಿಮಾನಯಾನ ಸಂಸ್ಥೆಗಳಿಗೆ DGCA ಎಚ್ಚರಿಕೆ

ಇಂಧನ ಮೂಲಸೌಕರ್ಯದ ಮೇಲೆ ದಾಳಿ ಮಾಡಿ ದೊಡ್ಡ ತಪ್ಪು ಮಾಡಿದ್ದೀರಿ, ಮತ್ತೆ ದಾಳಿಯಾದರೆ ಒತ್ತಡಕ್ಕೆ ಮಣಿಯದೆ ಅನಿಯಂತ್ರಿತ ದಾಳಿ: ಇರಾನ್ ಕಠಿಣ ಎಚ್ಚರಿಕೆ

SCROLL FOR NEXT