ಮಹಾತ್ಮಾ ಗಾಂಧೀಜಿ 
ದೇಶ

ಮಹಾತ್ಮಾ ಗಾಂಧೀಜಿ ಪ್ರತಿಮೆ, ಭಾವಚಿತ್ರವನ್ನು ತೆಗೆಯಿರಿ; ವಿವಾದ ಸೃಷ್ಟಿಸಿದ ಮಹಿಳಾ ಐಎಎಸ್ ಅಧಿಕಾರಿ ಟ್ವೀಟ್!

ವಿಶ್ವದಾದ್ಯಂತ ಇರುವ ಮಹಾತ್ಮಾ ಗಾಂಧೀಜಿ ಪ್ರತಿಮೆಗಳನ್ನು ತೆಗೆದುಹಾಕಬೇಕು ಮತ್ತು ನೋಟುಗಳಿಂದ ...

ಮುಂಬೈ: ವಿಶ್ವದಾದ್ಯಂತ ಇರುವ ಮಹಾತ್ಮಾ ಗಾಂಧೀಜಿ ಪ್ರತಿಮೆಗಳನ್ನು ತೆಗೆದುಹಾಕಬೇಕು ಮತ್ತು ನೋಟುಗಳಿಂದ ಸಹ ಅವರ ಭಾವಚಿತ್ರವನ್ನು ತೆಗೆಯಬೇಕು ಎಂದು ಮುಂಬೈ ಮಹಿಳಾ ಐಎಎಸ್ ಅಧಿಕಾರಿಯೊಬ್ಬರು ಮಾಡಿರುವ ಟ್ವೀಟ್ ವಿವಾದ ಸೃಷ್ಟಿಸಿದೆ.
ದೇಶದ ಪಿತಾಮಹ ಮಹಾತ್ಮಾ ಗಾಂಧಿಯವರ ಹೆಸರಿನಲ್ಲಿರುವ ದೇಶದ ಸಂಸ್ಥೆಗಳು ಮತ್ತು ರಸ್ತೆಗಳಿಗೆ ಮರುನಾಮಕರಣ ಮಾಡಬೇಕು ಎಂದು ಒತ್ತಾಯಿಸಿದ ಅವರು, ಮಹಾತ್ಮಾ ಗಾಂಧಿಯನ್ನು ನಾಥೂರಾಮ್ ಗೋಡ್ಸೆ ಕೊಂದಿದ್ದು ಒಳ್ಳೆಯದೇ ಆಯಿತು ಎಂದಿದ್ದರು.
ಮಹಾತ್ಮಾ ಗಾಂಧಿಯವರನ್ನು ತೆಗಳಿ ವಿವಾದಾತ್ಮಕ ಟ್ವೀಟ್ ಮಾಡಿ ನಾಥೂರಾಮ್ ಗೋಡ್ಸೆಯವರನ್ನು ವೈಭವೀಕರಿಸಿದ್ದಕ್ಕೆ ನಿಧಿ ಚೌಧರಿಯವರನ್ನು ಸೇವೆಯಿಂದ ಅಮಾನತು ಮಾಡಬೇಕೆಂದು ಎನ್ ಸಿಪಿ ಒತ್ತಾಯಿಸಿದೆ.
ಮಹಾತ್ಮಾ ಗಾಂಧಿಯವರ ಮೃತದೇಹದ ಫೋಟೋ ಹಾಕಿ ಮೇ 17ರಂದು ಮಾಡಿದ್ದ ಟ್ವೀಟ್ ನಲ್ಲಿ ನಿಧಿ ಚೌಧರಿ, 150ನೇ ಜಯಂತಿಯನ್ನು ಅದ್ವಿತೀಯವಾಗಿ ಆಚರಿಸುವುದರಲ್ಲಿ ಏನಿದೆ, ಏನಾಗುತ್ತಿದೆ ನಮ್ಮ ದೇಶದಲ್ಲಿ, ಭಾರತದ ಕರೆನ್ಸಿಗಳು, ಪ್ರತಿಮೆಗಳಿಂದ ಮಹಾತ್ಮಾ ಗಾಂಧಿಯವರ ಭಾವಚಿತ್ರವನ್ನು ತೆಗೆದುಹಾಕಲು ಇದು ಸರಿಯಾದ ಸಮಯ, ಅವರ ಹೆಸರಿನಲ್ಲಿರುವ ಶಿಕ್ಷಣ ಸಂಸ್ಥೆಗಳು, ರಸ್ತೆಗಳಿಗೆ ಮರು ನಾಮಕರಣ ಮಾಡಬೇಕು. ಅದು ನಿಜಕ್ಕೂ ನಮ್ಮ ಕಡೆಯಿಂದ ಮಾಡಬಹುದಾದ ನಿಜವಾದ ಗೌರವ, 1948ರ ಜನವರಿ 30ಕ್ಕೆ ಗೋಡ್ಸೆಯವರಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದರು.
ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಎನ್ ಸಿಪಿ ನಾಯಕ ಜಿತೇಂದ್ರ ಔಹಾದ್ ಚೌಧರಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.
ವಿವಾದ ಸೃಷ್ಟಿಯಾದ ಬಳಿಕ ಪ್ರತಿಕ್ರಿಯಿಸಿರುವ ನಿಧಿ ಚೌಧರಿ, ನನ್ನ ಟ್ವೀಟ್ ನ್ನು ತಪ್ಪಾಗಿ ಅರ್ಥೈಸಿದವರು ನನ್ನ ಟೈಮ್ ಲೈನ್ ನೋಡಬೇಕು. ಕಳೆದ ಕೆಲವು ತಿಂಗಳಿನಿಂದ ನಾನು ಮಾಡಿರುವ ಟ್ವೀಟ್ ಗಳಿಗೆ ಸ್ವಯಂ ವಿವರಣೆ ನೀಡಿದ್ದೇನೆ. ಕಟುವಾಗಿ ಟೀಕಿಸಿ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿರುವುದಕ್ಕೆ ನನಗೆ ತೀವ್ರ ದುಃಖವಾಗುತ್ತಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT