ಮತ್ತೆ ಎನ್ ಡಿಎ ಮೈತ್ರಿಕೂಟದಿಂದ ಜೆಡಿಯು ಹೊರಕ್ಕೆ?: ನಿತೀಶ್ ಕುಮಾರ್ ಹೇಳಿದ್ದೇನು? 
ದೇಶ

ಮತ್ತೆ ಎನ್ ಡಿಎ ಮೈತ್ರಿಕೂಟದಿಂದ ಜೆಡಿಯು ಹೊರಕ್ಕೆ?: ನಿತೀಶ್ ಕುಮಾರ್ ಹೇಳಿದ್ದೇನು?

ಮೋದಿ ಸರ್ಕಾರದ ಸಚಿವ ಸಂಪುಟದಲ್ಲಿ ಜೆಡಿಯು ಪಕ್ಷಕ್ಕೆ ಸೂಕ್ತ ಪ್ರಾತಿನಿಧ್ಯ ದೊರೆತಿಲ್ಲ ಎಂಬ ಅಸಮಾಧಾನವನ್ನು ಜೆಡಿಯು ನಾಯಕರು ಬಹಿರಂಗಪಡಿಸಿದ್ದಾರೆ.

ಪಾಟ್ನಾ: ಮೋದಿ ಸರ್ಕಾರದ ಸಚಿವ ಸಂಪುಟದಲ್ಲಿ ಜೆಡಿಯು ಪಕ್ಷಕ್ಕೆ ಸೂಕ್ತ ಪ್ರಾತಿನಿಧ್ಯ ದೊರೆತಿಲ್ಲ ಎಂಬ ಅಸಮಾಧಾನವನ್ನು ಜೆಡಿಯು ನಾಯಕರು ಬಹಿರಂಗಪಡಿಸಿದ್ದಾರೆ. 
ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡಿರುವ ಬಿಜೆಪಿ ಮಂತ್ರಿಮಂಡಲ ರಚನೆ ವೇಳೆ ಎನ್ ಡಿಎ ಮೈತ್ರಿಕೂಟದ ಪಕ್ಷಗಳನ್ನು ಕಡೆಗಣಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ನಡುವೆ ಬಿಹಾರದಲ್ಲಿ ಬಿಜೆಪಿ ಜೊತೆ ಮೈತ್ರಿ ಸರ್ಕಾರ ನಡೆಸಿತ್ತಿರುವ ನಿತೀಶ್ ಕುಮಾರ್ ನೇತೃತ್ವದ ಜೆಡಿಯು, ಕೇಂದ್ರ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ದೊರೆಯದ ಹಿನ್ನೆಲೆಯಲ್ಲಿ ಎನ್ ಡಿಎ ಮೈತ್ರಿಕೂಟ ತೊರೆಯುತ್ತದೆ ಎಂಬ ವರದಿಗಳು ಪ್ರಕಟವಾಗಿತ್ತು. 
ಇದಕ್ಕೆ ಪೂರಕವಾಗಿ ನಿತೀಶ್ ಕುಮಾರ್ ರಾಜ್ಯ ಮಂತ್ರಿಮಂಡಲ ವಿಸ್ತರಣೆ ವೇಳೆ ಬಿಜೆಪಿ ಪ್ರಾತಿನಿಧ್ಯ ಸಂಖ್ಯೆಯನ್ನು ಒಂದಕ್ಕೆ ಇಳಿಕೆ ಮಾಡಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಜೆಡಿಯು ಎನ್ ಡಿಎ ಮೈತ್ರಿಕೂಟವನ್ನು ತೊರೆಯಲಿದೆ ಎಂಬ ವರದಿ ಪ್ರಕಟವಾಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ನಿತೀಶ್ ಕುಮಾರ್ ಮೈತ್ರಿಕೂಟಕ್ಕೆ ಸಮಾನ ಪ್ರಾತಿನಿಧ್ಯವಿರಬೇಕಿತ್ತು. ಆದರೆ ಜೇಡಿಯು ಇನ್ನು ಮುಂದಿನ ದಿನಗಳಲ್ಲಿ ನಾವು ಕೇಂದ್ರ ಮಂತ್ರಿ ಮಂಡಲಕ್ಕೆ ಸೇರ್ಪಡೆಯಾಗುವುದಿಲ್ಲ ಎಂಬುದನ್ನು ಪಕ್ಷದ ರಾಷ್ಟ್ರಾಧ್ಯಕ್ಷನಾಗಿ ಸ್ಪಷ್ಟಪಡಿಸುತ್ತೇನೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. 
ಕೇಂದ್ರದಲ್ಲಿ ಜೆಡಿಯುಗೆ ಒಂದು ಸಚಿವ ಸ್ಥಾನ ನೀಡುವುದಾಗಿ ನನಗೆ ಹೇಳಿದಾಗ, ನಮಗೆ ಬೇಕಿಲ್ಲ, ಆದರೆ ಪಕ್ಷವನ್ನು ಕೇಳುತ್ತೇನೆ ಎಂದು ಹೇಳಿದ್ದೆ. ನಾನು ಪಕ್ಷದ ನಾಯಕರ ಅಭಿಪ್ರಾಯ ಸಂಗ್ರಹಣೆ ಮಾಡಿದೆ, ನಾವು ಒಗ್ಗಟ್ಟಿನಿಂದ ಇರಬೇಕಾದರೆ ಕೇವಲ ಸಾಂಕೇತಿಕ ಪ್ರಾತಿನಿಧ್ಯ ಬೇಕಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಯಿತು, ನಮಗೆ ಅಸಮಾಧಾನವಿಲ್ಲ. ನಾವು ಒಗ್ಗಟ್ಟಿನಿಂದ ಇದ್ದೇವೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT