ಸಂಗ್ರಹ ಚಿತ್ರ 
ದೇಶ

ವಿದ್ಯಾರ್ಥಿಗಳಿಗೆ ಹಿಂದಿ ಕಡ್ಡಾಯವಲ್ಲ, ಮೋದಿ ಸರ್ಕಾರ ಯು-ಟರ್ನ್

ಹಿಂದಿ ಭಾಷೆ ಕಡ್ಡಾಯ ಕಲಿಕೆ ವಿಚಾರವಾಗಿ ಕೇಂದ್ರ ಸರ್ಕಾರ ಯುಟರ್ನ್ ಹೊಡೆದಿದೆ. ಸರ್ಕಾರದ ನಿರ್ಧಾರಕ್ಕೆ ಹಿಂದಿಯೇತರ ರಾಜ್ಯಗಳಿಂದ...

ನವದೆಹಲಿ: ಹಿಂದಿ ಭಾಷೆ ಕಡ್ಡಾಯ ಕಲಿಕೆ ವಿಚಾರವಾಗಿ ಕೇಂದ್ರ ಸರ್ಕಾರ ಯುಟರ್ನ್ ಹೊಡೆದಿದೆ. ಸರ್ಕಾರದ ನಿರ್ಧಾರಕ್ಕೆ ಹಿಂದಿಯೇತರ ರಾಜ್ಯಗಳಿಂದ ಬೃಹತ್ ವಿರೋಧ ವ್ಯಕ್ತವಾಗುತ್ತಿದ್ದಂತೆ ಸರ್ಕಾರವು ಶೈಕ್ಷಣಿಕ ಪಠ್ಯದಲ್ಲಿ ಮೂರು ಭಾಷೆಗಳ ಕಲಿಕೆ ಕಡ್ಡಾಯ ಎಂಬ ಷರತ್ತನ್ನು ಹಿಂಪಡೆದಿದೆ.ವಿದ್ಯಾರ್ಥಿಗಳಿಗೆ ಹಿಂದಿ ಕಡ್ಡಾಯವಾಗಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ.
ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸೇರಿದಂತೆ ಬಹುತೇಕ ರಾಜಕೀಯ ಪಕ್ಷಗಳುರಾಷ್ಟ್ರೀಯ ಶಿಕ್ಷಣ ನೀತಿಯ ಕರಡುಪ್ರತಿನಲ್ಲಿ ಪ್ರಸ್ತಾಪಿಸಿರುವ ಆಡ್-ಆನ್ ವೈಶಿಷ್ಟ್ಯದಲ್ಲಿನ ತ್ರಿಭಾಷಾ ಸೂತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದವು.ಇದು "ಹಿಂದಿ ಹೇರಿಕೆ"ಗೆ ಕೇಂದ್ರದ ಕುತಂತ್ರ ಎಂದು ಅವುಗಳು ಆರೋಪಿಸಿದ್ದವು.
ತಮಿಳುನಾಡು ಸರ್ಕಾರವು ದ್ವಿಭಾಷಾ ಸೂತ್ರವನ್ನು ಮುಂದುವರಿಸಲಿದೆ ಎಂದು ಹೇಳಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಪಿ. ಚಿದಂಬರಂ ತಮಿಳು ಭಾಷೆಯ ಸರಣಿ ಟ್ವೀಟ್ ಮಾಡಿದ್ದು  "ಶಾಲೆಗಳಲ್ಲಿ ತ್ರಿಭಾಷಾ ಸೂತ್ರದ ಅರ್ಥವೇನು?ಕೇಂದ್ರ ಸರ್ಕಾರ  ಹಿಂದಿ ಕಡ್ಡಾಯ ಆಗಿಸಲು ಬಯಸುತ್ತಿದೆ,  ಹಿಂದಿ ಭಾಷೆ ಕಡ್ಡಾಯ ವಿಷಯವಾಗಿದ್ದರೆ ಇದು ಅವರ ಹಿಂದಿ ಹೇರಿಕೆಯ ಸಾಕ್ಷಿಯಾಗಲಿದೆ" ಅವರು ಹೇಳಿದ್ದಾರೆ. ಅಲ್ಲದೆ "ಹಿಂದಿ ಹೇರಿಕೆಯ ಮೂಲಕ ಬಿಜೆಪಿ ಸರ್ಕಾಅದ ನೈಜ ಮುಖ ಹೊರಹೊಮ್ಮುತ್ತಿದೆ" ಎಂದೂ ಚಿದಂಬರಂ ಹೇಳಿದರು.
ಏತನ್ಮಧ್ಯೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮಿಳಿನಲ್ಲೇ ಟ್ವೀಟ್ ಮಾಡಿ ಕೇಂದ್ರ ಹಿಂದಿ ಹೇರಿಕೆ ಮಾಡುತ್ತಿದೆ ಎಂಬುದು ಸುಳ್ಳು ಎಂದು ಹೇಳಿದ್ದಾರೆ.
ಇನ್ನು ಸಾಮಾಜಿಕ ತಾಣಗಳಾದ ಟ್ವಿಟ್ಟರ್, ಪೇಸ್ ಬುಕ್ ಗಳಲ್ಲಿ "#StopHindiImposition, #TNAgainstHindiImposition  ಎಂಬ ಟ್ರೆಂಡಿಂಗ್ ಪ್ರಾರಂಭವಾಗಿದೆ."ಪೂರ್ವ ಪ್ರಾಥಮಿಕ ಶಾಲೆಗಳಿಂದ 12ನೇ ತರಗತಿ ವರೆಗೆ ತ್ರಿಭಾಷಾ ಸೂತ್ರ ಅಳವಡಿಕೆ ಆಘಾತಕಾರಿಯಾಗಿದ್.ಇದು ದೇಶವನ್ನು ವಿಭಜಿಸುವ ಶಿಫಾರಸಾಗಲಿದೆ" ಎಂದು ಡಿಎಂಕೆ ಮುಖ್ಯ ಎಂಕೆ ಸ್ಟಾಲಿನ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT