ಮಮತಾ ಬ್ಯಾನರ್ಜಿ 
ದೇಶ

ಇವಿಎಂಗಳ ಮಾಹಿತಿ ಪತ್ತೆಗೆ ಸತ್ಯಶೋಧನಾ ಸಮಿತಿ ರಚಿಸಬೇಕು- ಮಮತಾ ಬ್ಯಾನರ್ಜಿ

ಲೋಕಸಭಾ ಚುನಾವಣೆಯಲ್ಲಿ ಬಳಸಲಾದ ವಿಇಎಂಗಳ ವಿಶ್ವಾಸಾರ್ಹತೆ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದು, ಮತ್ತೆ ಬ್ಯಾಲೆಟ್ ಕಾಗದದಲ್ಲಿ ಚುನಾವಣೆಗಾಗಿ ಪ್ರತಿಪಕ್ಷಗಳು ಒಗ್ಗಟ್ಟಾಗಿ ಹೋರಾಡುವಂತೆ ಆಗ್ರಹಿಸಿದ್ದಾರೆ.

ಕೊಲ್ಕತ್ತಾ: ಲೋಕಸಭಾ ಚುನಾವಣೆಯಲ್ಲಿ ಬಳಸಲಾದ ವಿಇಎಂಗಳ ವಿಶ್ವಾಸಾರ್ಹತೆ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದು, ಮತ್ತೆ ಬ್ಯಾಲೆಟ್ ಕಾಗದದಲ್ಲಿ ಚುನಾವಣೆಗಾಗಿ  ಪ್ರತಿಪಕ್ಷಗಳು ಒಗ್ಗಟ್ಟಾಗಿ ಹೋರಾಡುವಂತೆ ಆಗ್ರಹಿಸಿದ್ದಾರೆ.

ಇವಿಎಂಗಳ ಮಾಹಿತಿ ಕಂಡುಹಿಡಿಯಲು ಸತ್ಯ ಶೋಧನಾ ಸಮಿತಿ ರಚಿಸಬೇಕು ಎಂದು ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ. ಪ್ರಜಾಪ್ರಭುತ್ವವನ್ನು ನಾವುಗಳು ರಕ್ಷಿಸಬೇಕಾಗಿದೆ. ನಮ್ಮಗೆ ಇವಿಎಂಗಳು ಬೇಡ. ಮತ್ತೆ ಬ್ಯಾಲೆಟ್ ಪೇಪರ್ ವ್ಯವಸ್ಥೆಗೆ ಹೋರಾಡಬೇಕಾಗಿದೆ. ಇದಕ್ಕಾಗಿ ಆಂದೋಲನ ಆರಂಭಿಸುತ್ತೇವೆ. ಬಂಗಾಳದಿಂದಲೇ ಅದು ಪ್ರಾರಂಭವಾಗಲಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಮತ್ತೆ ಬ್ಯಾಲೆಟ್ ಪೇಪರ್ ಚುನಾವಣಾ ವ್ಯವಸ್ಥೆ ಜಾರಿಗಾಗಿ ಎಲ್ಲರೂ ಒಗ್ಗಟ್ಟಾಗಿ ಹೋರಾಡುವಂತೆ 23 ರಾಜಕೀಯ ಪಕ್ಷಗಳಿಗೆ ಹೇಳುತ್ತೇನೆ. ಅಮೆರಿಕಾದಲ್ಲೂ ಕೂಡಾ ಇವಿಎಂಗಳನ್ನು ಬ್ಯಾನ್ ಮಾಡಲಾಗಿದೆ .ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಣ, ತೊಳ್ಬಲ, ಸಾಂವಿಧಾನಿಕ ಸಂಸ್ಥೆಗಳು ಹಾಗೂ  ಮಾಧ್ಯಮಗಳಿಂದ ಗೆಲುವು ಸಾಧಿಸಿದೆ ಎಂದರು.
ಪಶ್ಚಿಮ ಬಂಗಾಳದಲ್ಲಿನ 42 ಲೋಕಸಭಾ ಕ್ಷೇತ್ರಗಳ ಪೈಕಿಯಲ್ಲಿ ಬಿಜೆಪಿ 18  ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಎಡಪಕ್ಷಗಳೇ ಕಾರಣ ಎಂದ ಮಮತಾ ಬ್ಯಾನರ್ಜಿ, ಆದರೆ, ಟಿಎಂಸಿಗೆ ಮತ ಹಂಚಿಕೆಯಲ್ಲಿ ಶೇ, 4 ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT