ಇಂದಿರಾ ಗಾಂಧಿ 
ದೇಶ

ಉತ್ತರ ಪ್ರದೇಶದಲ್ಲಿ ಇಂದಿರಾ ಗಾಂಧಿ ಪ್ರತಿಮೆಗೆ ಬುರ್ಖಾ, ಕಾಂಗ್ರೆಸ್ ನಿಂದ ಪ್ರತಿಭಟನೆ

ಉತ್ತರ ಪ್ರದೇಶದ ಲಿಖಿಂಪುರ್ ಕೇರಿಯ ಗೋಲ ಪ್ರದೇಶದಲ್ಲಿರುವ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರ ಪ್ರತಿಮೆಗೆ...

ಲಖಿಂಪುರ್ ಕೇರಿ: ಉತ್ತರ ಪ್ರದೇಶದ ಲಿಖಿಂಪುರ್ ಕೇರಿಯ ಗೋಲ ಪ್ರದೇಶದಲ್ಲಿರುವ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರ ಪ್ರತಿಮೆಗೆ ದುಷ್ಕರ್ಮಿಗಳು ಬುರ್ಖಾ ಹಾಕಿದ ಘಟನೆ ಸೋಮವಾರ ನಡೆದಿದೆ.
ದುಷ್ಕರ್ಮಿಗಳ ಈ ಕೃತ್ಯದಿಂದ ಆಕ್ರೋಶಗೊಂಡ ಕಾಂಗ್ರೆಸ್ ನಾಯಕರು ರಸ್ತೆಗಿಳಿದು ಪ್ರತಿಭಟನೆ ಮಾಡುತ್ತಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಿ, ಪ್ರಕರಣದ ತನಿಖೆ ನಡೆಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಆಡಳಿತದ ಹಿರಿಯ ಅಧಿಕಾರಿಗಳು ಆಗಮಿಸಿದ್ದು, ಪ್ರತಿಮೆಗೆ ಹಾಕಿದ್ದ ಬುರ್ಖಾ ತೆಗೆದು, ದುಷ್ಕರ್ಮಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಶಾಂತಿ ಕದಡುವ ಉದ್ದೇಶದಿಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ. ಆದರೆ ನಾವು ಶೀಘ್ರದಲ್ಲೇ ಆರೋಪಿಗಳನ್ನು ಗುರುತಿಸಿ, ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ