ನಾಪತ್ತೆಯಾದ ವಿಮಾನ ಎಎನ್-32 
ದೇಶ

ನಾಪತ್ತೆಯಾದ ವಾಯುಪಡೆಯ ಎಎನ್-32 ವಿಮಾನದ ಅವಶೇಷಗಳು ಪತ್ತೆಯಾಗಿಲ್ಲ: ಐಎಎಫ್

ಎಂಟು ಸಿಬ್ಬಂದಿ ಹಾಗೂ ಐದು ಪ್ರಯಾಣಿಕರಿದ್ದ ಭಾರತೀಯ ವಾಯುಪಡೆಯ ವಿಮಾನವೊಂದು ನಾಪತ್ತೆಯಾಗಿದ್ದು, ಅದರ ಅವಶೇಷಗಳು ಇನ್ನು ಪತ್ತೆಯಾಗಿಲ್ಲ....

ಗುಹವಾಟಿ: ಎಂಟು ಸಿಬ್ಬಂದಿ ಹಾಗೂ ಐದು ಪ್ರಯಾಣಿಕರಿದ್ದ ಭಾರತೀಯ ವಾಯುಪಡೆಯ ವಿಮಾನವೊಂದು ನಾಪತ್ತೆಯಾಗಿದ್ದು, ಅದರ ಅವಶೇಷಗಳು ಇನ್ನು ಪತ್ತೆಯಾಗಿಲ್ಲ ಎಂದು ಸೋಮವಾರ ಭಾರತೀಯ ವಾಯುಪಡೆ(ಐಎಎಫ್) ಸ್ಪಷ್ಟಪಡಿಸಿದೆ.
ಇಂದು ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಅಸ್ಸಾಂ ನ ಜೊರ್ಹತ್ ಏರ್ ಬೇಸ್ ನಿಂದ ಟೇಕ್ ಆಫ್ ಆಗಿದ್ದ ಭಾರತೀಯ ವಾಯುಪಡೆಯ ಎಎನ್-32 ವಿಮಾನ, ಇದುವರೆಗೂ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ವರದಿಗಳು ತಿಳಿಸಿವೆ.
ಒಟ್ಟು 13 ಜನರನ್ನು ಹೊತ್ತ ವಿಮಾನ ಮಧ್ಯಾಹ್ನ 1 ಗಂಟೆ ಗೆ ಟೇಕ್ ಆಫ್ ಆಗಿತ್ತು. ಅರುಣಾಚಲ ಪ್ರದೇಶದ ಮೆಂಚುಕಾ ಏರ್ ಫೀಲ್ಡ್ ನಲ್ಲಿ ಲ್ಯಾಂಡ್ ಆಗಬೇಕಾಗಿತ್ತು. ಆದರೆ ವಿಮಾನ ಅರುಣಾಚಲ ಪ್ರದೇಶ ತಲುಪಿಲ್ಲ. ವಿಮಾನ ಪತ್ತೆಗೆ ಎಲ್ಲ ಮೂಲಗಳಿಂದ ಪ್ರಯತ್ನ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಮಧ್ಯ, ನಾಪತ್ತೆಯಾದ ವಿಮಾನ ಪತನವಾಗಿದ್ದು, ಅದರ ಅವಶೇಷಗಳು ಅರುಣಾಚಲ ಪ್ರದೇಶದ ಪಾಯುಮ್​ ಗ್ರಾಮದ ಬಳಿ ಪತ್ತೆಯಾಗಿವೆ ಎಂಬ ವರದಿಗಳನ್ನು ಭಾರತೀಯ ವಾಯುಪಡೆ ಸ್ಪಷ್ಟವಾಗಿ ತಳ್ಳಿಹಾಕಿದೆ.
ವಿಮಾನ ಪತನವಾಗಿರುವ ಸ್ಥಳದ ಬಗ್ಗೆ ಕೆಲವು ವರದಿಗಳು ಬರುತ್ತಿವೆ. ಆದರೆ ಅಲ್ಲಿ ಯಾವುದೇ ಅವಶೇಷಗಳು ಪತ್ತೆಯಾಗಿಲ್ಲ ಎಂದು ಐಎಎಫ್ ಟ್ವೀಟ್ ಮಾಡಿದೆ.
ನಾಪತ್ತೆಯಾದ ವಿಮಾನ ಶೋಧಕ್ಕಾಗಿ ನಾವು ನಿರಂತರ ಪ್ರಯತ್ನ ನಡೆಸುತ್ತಿದ್ದು, ಈ ಕುರಿತು ಭಾರತೀಯ ವಾಯುಪಡೆಯ ಉಪಮುಖ್ಯಸ್ಥರ ಜೊತೆ ಮಾತುಕತೆ ನಡೆಸಲಾಗಿದೆ ಎಂದು ನೂತನ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಅವರು ಟ್ವೀಟ್​ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ನನಗೆ 'CM ವಿಜಯ್' ಕಂಡ್ರೆ ಅಸೂಯೆ: ಸಾರ್ವಜನಿಕವಾಗಿ ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!

SCROLL FOR NEXT