ಕೇಂದ್ರ ಸಚಿವ ಗಿರಿರಾಜ್ ಸಿಂಗ್ 
ದೇಶ

ಜನಸಂಖ್ಯಾ ನಿಯಂತ್ರಣ ಕಾನೂನು ಜನಾಂದೋಲನವಾಗಬೇಕು: ಕೇಂದ್ರ ಸಚಿವ ಗಿರಿರಾಜ್ ಸಿಂಗ್

ಭಾರತದಲ್ಲಿ ಜನಸಂಖ್ಯಾ ನಿಯಂತ್ರಣ ಕುರಿತ ತನ್ನ ನಿಲುವನ್ನು ಪುನರ್ ಉಚ್ಚರಿಸಿರುವ ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಜನಸಂಖ್ಯಾ ನಿಯಂತ್ರಣ ಕಾನೂನನ್ನು ಜನರು ಒಂದು ಆಂದೋಲನವನ್ನಾಗಿ ಮಾಡಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.

ನವದೆಹಲಿ: ಭಾರತದಲ್ಲಿ ಜನಸಂಖ್ಯಾ ನಿಯಂತ್ರಣ ಕುರಿತ ತನ್ನ ನಿಲುವನ್ನು ಪುನರ್ ಉಚ್ಚರಿಸಿರುವ ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಜನಸಂಖ್ಯಾ ನಿಯಂತ್ರಣ ಕಾನೂನನ್ನು ಒಂದು ಆಂದೋಲನವನ್ನಾಗಿ ಮಾಡಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.

ಜನಸಂಖ್ಯಾ ಹೆಚ್ಚಳ ದೇಶದ ಅಭಿವೃದ್ಧಿ ಹಾಗೂ ಸೌಹಾರ್ದಯುತ ಸಮಾಜಕ್ಕೆ ಅಡ್ಡಿಯನ್ನುಂಟು ಮಾಡುತ್ತಿದೆ. ಪ್ರತಿಯೊಂದು ಮನೆಯಲ್ಲೂ ಜನಸಂಖ್ಯಾ ನಿಯಂತ್ರಣ ಕಾನೂನು ಪ್ರಚಾರವನ್ನು ಕೈಗೊಳ್ಳಬೇಕು. ಕಾಲ ಮತ್ತು ಸಂಪನ್ಮೂಲಗಳು ಮಿತಿಯಲ್ಲಿದ್ದು, ರಸ್ತೆಯಿಂದ ಪಾರ್ಲಿಮೆಂಟ್ ವರೆಗೂ ಆಂದೋಲನವನ್ನಾಗಿ ರೂಪಿಸಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.

ಮೂರು ಮಕ್ಕಳನ್ನು ಪಡೆದವರಿಗೆ ಮತದಾನದ ಹಕ್ಕನ್ನು ನೀಡದಂತೆ ಸರ್ಕಾರ ಕಾನೂನು ಜಾರಿಗೆ ತರಬೇಕೆಂಬ ಯೋಗ ಗುರು ಬಾಬಾ ರಾಮ್ ದೇವ್ ಅವರ ಹೇಳಿಕೆಯನ್ನು ಗಿರಿರಾಜ್ ಸಿಂಗ್ ಈ ಹಿಂದೆ ಬೆಂಬಲಿಸಿದ್ದರು.

ಮುಂದಿನ 50 ವರ್ಷಗಳಲ್ಲಿ ದೇಶದ ಜನಸಂಖ್ಯೆ 150 ಕೋಟಿಗಿಂತ  ಹೆಚ್ಚಾಗಲು ನಾವು ಬಿಡಬಾರದು, ಮೂರು ಮಕ್ಕಳನ್ನು ಪಡೆದವರಿಗೆ ಮತದಾನದ ಹಕ್ಕನ್ನು ಸರ್ಕಾರ ರದ್ದುಪಡಿಸುವುದರಿಂದ ಇದು ಸಾಧ್ಯವಾಗಲಿದೆ. ಇಲ್ಲವಾದರೆ ಚುನಾವಣೆಗೆ ಸ್ಪರ್ಧಿಸಿ ಸರ್ಕಾರದಿಂದ ಬರುವ ಸವಲತ್ತುಗಳನ್ನು ಪಡೆದು ಖುಷಿಪಡುತ್ತಾರೆ ಎಂದು ರಾಮ್ ದೇವ್ ಹೇಳಿಕೆ ನೀಡಿದ್ದರು.

ವಿಶ್ವಸಂಸ್ಥೆ ಪ್ರಕಾರ 2017ಲ್ಲಿ ಭಾರತದಲ್ಲಿ ಜನಸಂಖ್ಯೆ ಅಂದಾಜು 1.3 ಬಿಲಿಯನ್ ಇತ್ತು. 2024ರೊಳಗೆ ಇದು ಚೀನಾವನ್ನು ಹಿಂದಿಕ್ಕುವ ಸಾಧ್ಯತೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಡಿಗೋ ಬಿಕ್ಕಟ್ಟು: ನಾಲ್ವರು ವಿಮಾನ ಕಾರ್ಯಾಚರಣೆ ಇನ್ಸ್‌ಪೆಕ್ಟರ್‌ಗಳನ್ನು ಅಮಾನತುಗೊಳಿಸಿದ DGCA!

ಬೆಂಗಳೂರು: ನಾಲ್ಕು ಅಂತಸ್ತಿನ ಕಟ್ಟಡ ಬೆಂಕಿಗೆ ಆಹುತಿ; ನಿವಾಸಿಗಳನ್ನು ರಕ್ಷಿಸಿದ ಮೂವರು ಪೊಲೀಸರು!

ಮಾಗಡಿ: ಮಾಜಿ ಸಚಿವ ಎಚ್ಎಂ ರೇವಣ್ಣ ಪುತ್ರನ ಕಾರು, ಬೈಕಿಗೆ ಡಿಕ್ಕಿ; ಯುವಕ ಸಾವು

ಆಂಧ್ರಪ್ರದೇಶ: ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಬಸ್ ಕಂದಕಕ್ಕೆ ಉರುಳಿಬಿದ್ದು 9 ಯಾತ್ರಿಕರು ಸಾವು, 22 ಮಂದಿಗೆ ಗಾಯ-Video

ಬೆಳಗಾವಿ ಅಧಿವೇಶನ ಮಧ್ಯೆ ಡಿನ್ನರ್ ಪಾಲಿಟಿಕ್ಸ್: ಸಿಎಂ ಬೆನ್ನಲ್ಲೇ 30ಕ್ಕೂ ಹೆಚ್ಚು ಶಾಸಕರ ಜೊತೆ ಡಿಸಿಎಂ ಮೀಟಿಂಗ್

SCROLL FOR NEXT